ನವದೆಹಲಿ: ಜನವರಿ 26ರಂದು ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ಸ್ತಬ್ಧಚಿತ್ರವು ಮೊದಲ ಸ್ಥಾನಗಳಿಸಿದೆ ಎಂದು ತಿಳಿದುಬಂದಿದೆ.
ಸ್ತಬ್ಧಚಿತ್ರದ ಒಂದು ಬದಿಯಲ್ಲಿ ಗಿನ್ನಿಸ್ ದಾಖಲೆಗೆ ಸೇರಿರುವ ಅಯೋಧ್ಯೆಯ ದೀಪೋತ್ಸವ ಆಚರಣೆಯ ವಿವರಗಳಿದ್ದು, ಜೊತೆಗೆ ಶ್ರೀರಾಮ, ಶಬರಿ, ಅಹಿಲ್ಯಾ, ಹನುಮಾನರ ಉಬ್ಬುಕಲಾಕೃತಿಗಳು ಇದ್ದವು.
ಇನ್ನು ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 17 ಸ್ತಬ್ಧಚಿತ್ರಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು.
ಪಥಸಂಚಲನದಲ್ಲಿ ತ್ರಿಪುರಾದ ಸ್ತಬ್ಧಚಿತ್ರವು ಎರಡನೇ ಸ್ಥಾನ ಪಡೆದುಕೊಂಡು, ಉತ್ತರಖಾಂಡ ರಾಜ್ಯವು ಮೂರನೇ ಸ್ಥಾನಗಳಿಸಿದೆ.
ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡುವಾಗ ಕಲೆ, ಸಂಸ್ಕೃತಿ, ಚಿತ್ರಕಲೆ, ಶಿಲ್ಪಕಲೆ, ಸಂಗೀತ, ವಸ್ತುಶಿಲ್ಪ, ನೃತ್ಯ ಸಂಯೋಜನೆ ಮತ್ತಿತರ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳನ್ನು ಒಳಗೊಂಡಿರುವ ತಜ್ಞರ ಸಮಿತಿ ಅನೇಕ ಸಭೆಗಳನ್ನು ನಡೆಸಿ ಬಳಿಕ ಪರಿಶೀಲಿಸಿ ಉತ್ತಮ ಸ್ತಬ್ಧಚಿತ್ರವನ್ನು ಆಯ್ಕೆ ಮಾಡುತ್ತದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…