Featured

ಗಣರಾಜ್ಯೋತ್ಸವ ಪರೇಡ್‍ನಲ್ಲಿ 13 ವರ್ಷಗಳ ಬಳಿಕ ಈ ಬಾರಿ  ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ – Vishwanews24

ಗಣರಾಜ್ಯೋತ್ಸವ ಪರೇಡ್‍ನಲ್ಲಿ  13 ವರ್ಷಗಳ ಬಳಿಕ ಈ ಬಾರಿ  ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ

ಬೆಂಗಳೂರು: ಸತತ 13 ವರ್ಷಗಳಿಂದ ಗಣರಾಜ್ಯೋತ್ಸವ  ಪರೇಡ್‍ನಲ್ಲಿ ರಾಜ್ಯದ ಸಂಸ್ಕೃತಿ ಮತ್ತು ಪರಂಪರೆಯನ್ನು ಸ್ಥಬ್ಧಚಿತ್ರದಲ್ಲಿ ಪ್ರದರ್ಶಿಸುತ್ತಿದ್ದ ಕರ್ನಾಟಕವು ಈ ಬಾರಿ ಅವಕಾಶವನ್ನು ಕಳೆದುಕೊಂಡಿದೆ.

ರಾಜ್ಯ ಸರ್ಕಾರದ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. 2023ರ ಗಣರಾಜ್ಯೋತ್ಸವದಂದು ಕರ್ನಾಟಕವು ರಾಗಿ ವೈವಿಧ್ಯತೆಯ ಕುರಿತು ಪ್ರದರ್ಶನ ನೀಡುವುದಾಗಿ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರವು ತಿರಸ್ಕರಿಸಿದೆ. ಇದರ ಪರಿಣಾಮವಾಗಿ ಜನವರಿ 26ರಂದು ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಗಣರಾಜ್ಯೋತ್ಸವ ದಿನದಂದು ಪರೇಡ್‍ನಲ್ಲಿ ಕರ್ನಾಟಕ 13 ವರ್ಷಗಳ ನಂತರ ಪ್ರತಿನಿಧಿಸುತ್ತಿಲ್ಲ ಎಂದು ತಿಳಿಸಿದರು.

ತಜ್ಞರ ಸಮಿತಿಯ ಮೊದಲ ಕೆಲವು ಸುತ್ತಿನ ಮೌಲ್ಯಮಾಪನದಲ್ಲಿ ಕರ್ನಾಟಕ ಪ್ರತಿನಿಧಿಸಿದ್ದ ವಿಷಯಾಧಾರಿತ ವಿನ್ಯಾಸ ಹಾಗೂ ಸಂಗೀತವು ಮೆಚ್ಚುಗೆಯನ್ನು ಪಡೆದಿತ್ತು. ಆದರೆ ಕೊನೆಯ ಸುತ್ತಿನಲ್ಲಿ ಕರ್ನಾಟಕದ ಸ್ಥಬ್ಧಚಿತ್ರನ್ನು ತಿರಸ್ಕರಿಸಲಾಗಿದೆ. ಅಲ್ಲದೇ ಇತರ ರಾಜ್ಯಗಳು ತಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ. ಹಲವು ವರ್ಷಗಳಿಂದ ಕೆಲವೇ ರಾಜ್ಯಗಳಿಗೆ ಅವಕಾಶವನ್ನು ನೀಡುತ್ತಿದ್ದಾರೆ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಹಿಂದೆ ಕರ್ನಾಟಕವು ಸ್ಥಬ್ಧಚಿತ್ರಕ್ಕಾಗಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿತ್ತು. ಅಷ್ಟೇ ಅಲ್ಲದೇ ಕೆಲವು ಸೃಜನಶೀಲ ಹಾಗೂ ವರ್ಣರಂಜಿತ ಸ್ಥಬ್ಧಚಿತ್ರಕ್ಕಾಗಿ ವ್ಯಾಪಕ ಮೆಚ್ಚುಗೆಯನ್ನು ಪಡೆದಿದೆ. 2022ರ ಗಣರಾಜ್ಯೋತ್ಸವದಂದು ಕರ್ನಾಟಕ ಪ್ರದರ್ಶಿಸಿದ್ದ ಸ್ಥಬ್ಧ ಚಿತ್ರಕ್ಕೆ 2ನೇ ಸ್ಥಾನ ಪಡೆದಿತ್ತು. ರಾಜ್ಯವು ಹೆಚ್ಚಾಗಿ ಜಾನಪದ, ಜೀವವೈವಿಧ್ಯ, ಕರಕುಶಲ ಈ ರೀತಿಯ ವಿಷಯವನ್ನೆ ಹೆಚ್ಚು ಕೇಂದ್ರಿಕರಿಸುತ್ತಾ ಬಂದಿದೆ.

2022ರ ಗಣರಾಜ್ಯೋತ್ಸವದಲ್ಲಿ ಕೇರಳ ಸಲ್ಲಿಸಿದ್ದ ನಾರಾಯಣಗುರು ಸ್ಥಬ್ಧ ಚಿತ್ರಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿರಲಿಲ್ಲ. ಇದರಿಂದಾಗಿ ನಾರಾಯಣಗುರು ಅನುಯಾಯಿಗಳ ಕೆಂಗಣ್ಣಿಗೆ ಕೇಂದ್ರ ಸರ್ಕಾರ ಗುರಿಯಾಗಿತ್ತು. ಇದೀಗ ಆದರೆ ಪ್ರತಿಬಾರಿ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ತಪ್ಪಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

2 hours ago