ನವದೆಹಲಿ: ಗಣರಾಜ್ಯೋತ್ಸವದ ಪರೇಡ್ 2022 ರ ಅತ್ಯುತ್ತಮ ಟ್ಯಾಬ್ಲೋ ಮತ್ತು ಅತ್ಯುತ್ತಮ ಮೆರವಣಿಗೆ ಸ್ಪರ್ಧೆಯ ಫಲಿತಾಂಶಗಳನ್ನು ಘೋಷಿಸಲಾಗಿದೆ. ಗಣರಾಜ್ಯೋತ್ಸವ ದಿನದಂದು ದೆಹಲಿಯ ರಾಜಪಥದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ಉತ್ತರ ಪ್ರದೇಶದ ‘ಒಂದು ಜಿಲ್ಲೆ ಒಂದು ಉತ್ಪನ್ನ ಮತ್ತು ಕಾಶಿ ವಿಶ್ವನಾಥ ಧಾಮ’ ಕುರಿತಾದ ಸ್ತಬ್ಧಚಿತ್ರ’ಕ್ಕೆ ಪ್ರಥಮ ಬಹುಮಾನ ಲಭಿಸಿದೆ. ಹಾಗೆಯೇ ಕರ್ನಾಟಕದ ,’ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು’ ಎಂಬ ವಿಷಯಾಧಾರಿತವಾಗಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ ಲಭಿಸಿದೆ.
ಕವಾಯತು ತಂಡಗಳ ಕಾರ್ಯಕ್ಷಮತೆಯನ್ನು ನಿರ್ಣಯಿಸಲು ಮೂರು ನ್ಯಾಯಾಧೀಶರ ಸಮಿತಿಗಳನ್ನು ನೇಮಿಸಲಾಗಿತ್ತು. ಇವರ ಮೌಲ್ಯಮಾಪನದ ಆಧಾರದ ಮೇಲೆ, ಭಾರತೀಯ ನೌಕಾಪಡೆಯ ಕವಾಯತು ತಂಡವು ಮೂರು ಸೇವೆಗಳಲ್ಲಿ ಅತ್ಯುತ್ತಮ ಕವಾಯತು ತುಕಡಿ ಎಂದು ಪ್ರಶಸ್ತಿ ಗಳಿಸಿದೆ. ಹಾಗೆಯೇ CAPF ಹಾಗೂ ಇತರ ಸಹಾಯಕ ಪಡೆಗಳಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಅತ್ಯುತ್ತಮ ಕವಾಯತು ತಂಡ ಎಂದು ಪ್ರಶಸ್ತಿ ಗಳಿಸಿದೆ.
ಜನವರಿ 26, 2022 ರಂದು ಗಣರಾಜ್ಯೋತ್ಸವದಂದು ನಡೆದ ಪರೇಡ್ನಲ್ಲಿ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಿದ್ದವು. ಇದರಲ್ಲಿ ಉತ್ತರ ಪ್ರದೇಶದ ಟ್ಯಾಬ್ಲೋವನ್ನು ಅತ್ಯುತ್ತಮ ಟ್ಯಾಬ್ಲೋ ಎಂದು ಆಯ್ಕೆ ಮಾಡಲಾಗಿದೆ. ಉತ್ತರ ಪ್ರದೇಶದ ಟ್ಯಾಬ್ಲೋ ‘ಒಂದು ಜಿಲ್ಲೆ ಒಂದು ಉತ್ಪನ್ನ ಮತ್ತು ಕಾಶಿ ವಿಶ್ವನಾಥ ಧಾಮ್’ ಎಂಬ ವಿಷಯವನ್ನು ಆಧರಿಸಿತ್ತು.
ಹಾಗೆಯೇ ಸಾಂಪ್ರದಾಯಿಕ ಕರಕುಶಲ ವಸ್ತುಗಳ ತೊಟ್ಟಿಲು ಆಧಾರಿತ ಟ್ಯಾಬ್ಲೋಗಾಗಿ ಕರ್ನಾಟಕಕ್ಕೆ ಎರಡನೇ ಸ್ಥಾನ ಲಭಿಸಿದೆ. ಮೂರನೇ ಪ್ರಶಸ್ತಿ ಮೇಘಾಲಯಕ್ಕೆ ಲಭಿಸಿದೆ. ಮೇಘಾಲಯದ 50 ವರ್ಷಗಳ ರಾಜ್ಯತ್ವ ಮತ್ತು ಮಹಿಳಾ ನೇತೃತ್ವದ ಸಹಕಾರಿ ಸಂಘಗಳು ಮತ್ತು ಸ್ವಸಹಾಯ ಸಂಘಗಳಿಗೆ ರಾಜತ್ವದ ಕೊಡುಗೆ ಎಂಬ ವಿಷಯಕ್ಕೆ ಮೂರನೇ ಸ್ಥಾನ ಲಭಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…