ಬೆಂಗಳೂರು : ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ ‘ರಚಿತಾ ರಾಮ್’ ವಿರುದ್ಧ ದೂರು ದಾಖಲಾಗಿದ್ದು, ಬಂಧನಕ್ಕೆ ಒತ್ತಾಯಿಸಲಾಗಿದೆ.
ಇಷ್ಟು ವರ್ಷ ಜನವರಿ 26 ಅಂದರೆ ಗಣರಾಜ್ಯೋತ್ಸವ. ಆದರೆ, ಈ ವರ್ಷ ಗಣರಾಜ್ಯೋತ್ಸವ ಮರೆತುಬಿಡಿ.
ಕ್ರಾಂತಿಯ ಉತ್ಸವ ಆಚರಿಸಿ ಅಷ್ಟೇ’ ಎಂದು ನಟಿ ರಚಿತಾ ರಾಮ್ ಹೇಳಿಕೆ ನೀಡಿದ್ದರು. ರಚಿತಾ ರಾಮ್ ಹೇಳಿಕೆ ಸಖತ್ ವೈರಲ್ ಆಗಿ ವ್ಯಾಪಕ ಟೀಕೆ, ಟ್ರೋಲ್ ಗೆ ಕಾರಣವಾಗಿತ್ತು, ಇದೇ ಹೇಳಿಕೆಗೆ ಸಂಬಂಧಿಸಿದಂತೆ ರಚಿತಾ ರಾಮ್ ವಿರುದ್ಧ ದೂರು ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ದೂರು ನೀಡಲಾಗಿದೆ.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಲಿಂಗಯ್ಯ ಈ ಬಗ್ಗೆ ಮಾತನಾಡಿದ್ದು, ಭಾರತದ ಸಂವಿಧಾನಕ್ಕೆ ನಟಿ ರಚಿತಾ ರಾಮ್ ಅವರು ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲೇ ಬೇಕು, ಅವರನ್ನು ಈ ದೇಶದಿಂದ ಗಡಿಪಾರು ಮಾಡಬೇಕು. ಈ ಹಿನ್ನೆಲೆ ರಚಿತಾ ರಾಮ್ ವಿರುದ್ಧ ಮದ್ದೂರಿನ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಶಿವಲಿಂಗಯ್ಯ ಹೇಳಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಹಾಗೂ ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾ ಜನವರಿ 26ರಂದು ತೆರೆಕಾಣುತ್ತಿದೆ. . ಗಣರಾಜ್ಯೋತ್ಸವದಂದು ಸಿನಿಮಾ ಬಿಡುಗಡೆಯಾಗಿದ್ದು, ಚಿತ್ರದ ಬಗ್ಗೆ ನಿರೀಕ್ಷೆಯಿದೆ. ಇದೀಗ ಹೇಳಿಕೆ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ ‘ರಚಿತಾ ರಾಮ್’ ವಿರುದ್ಧ ದೂರು ದಾಖಲಾಗಿದ್ದು, ಬಂಧನಕ್ಕೆ ಒತ್ತಾಯಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…