ಬೆಂಗಳೂರು : ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ ‘ರಚಿತಾ ರಾಮ್’ ವಿರುದ್ಧ ದೂರು ದಾಖಲಾಗಿದ್ದು, ಬಂಧನಕ್ಕೆ ಒತ್ತಾಯಿಸಲಾಗಿದೆ.
ಇಷ್ಟು ವರ್ಷ ಜನವರಿ 26 ಅಂದರೆ ಗಣರಾಜ್ಯೋತ್ಸವ. ಆದರೆ, ಈ ವರ್ಷ ಗಣರಾಜ್ಯೋತ್ಸವ ಮರೆತುಬಿಡಿ.
ಕ್ರಾಂತಿಯ ಉತ್ಸವ ಆಚರಿಸಿ ಅಷ್ಟೇ’ ಎಂದು ನಟಿ ರಚಿತಾ ರಾಮ್ ಹೇಳಿಕೆ ನೀಡಿದ್ದರು. ರಚಿತಾ ರಾಮ್ ಹೇಳಿಕೆ ಸಖತ್ ವೈರಲ್ ಆಗಿ ವ್ಯಾಪಕ ಟೀಕೆ, ಟ್ರೋಲ್ ಗೆ ಕಾರಣವಾಗಿತ್ತು, ಇದೇ ಹೇಳಿಕೆಗೆ ಸಂಬಂಧಿಸಿದಂತೆ ರಚಿತಾ ರಾಮ್ ವಿರುದ್ಧ ದೂರು ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ದೂರು ನೀಡಲಾಗಿದೆ.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಲಿಂಗಯ್ಯ ಈ ಬಗ್ಗೆ ಮಾತನಾಡಿದ್ದು, ಭಾರತದ ಸಂವಿಧಾನಕ್ಕೆ ನಟಿ ರಚಿತಾ ರಾಮ್ ಅವರು ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲೇ ಬೇಕು, ಅವರನ್ನು ಈ ದೇಶದಿಂದ ಗಡಿಪಾರು ಮಾಡಬೇಕು. ಈ ಹಿನ್ನೆಲೆ ರಚಿತಾ ರಾಮ್ ವಿರುದ್ಧ ಮದ್ದೂರಿನ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಶಿವಲಿಂಗಯ್ಯ ಹೇಳಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಹಾಗೂ ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾ ಜನವರಿ 26ರಂದು ತೆರೆಕಾಣುತ್ತಿದೆ. . ಗಣರಾಜ್ಯೋತ್ಸವದಂದು ಸಿನಿಮಾ ಬಿಡುಗಡೆಯಾಗಿದ್ದು, ಚಿತ್ರದ ಬಗ್ಗೆ ನಿರೀಕ್ಷೆಯಿದೆ. ಇದೀಗ ಹೇಳಿಕೆ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ ‘ರಚಿತಾ ರಾಮ್’ ವಿರುದ್ಧ ದೂರು ದಾಖಲಾಗಿದ್ದು, ಬಂಧನಕ್ಕೆ ಒತ್ತಾಯಿಸಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…