Featured

ಗಣೇಶನ ವಿಗ್ರಹಗಳನ್ನು ಕೆರೆಗಳಲ್ಲಿ ವಿಸರ್ಜಿಸಬಾರದು, ಅದಕ್ಕಾಗಿ ಕೃತಕ ಕೆರೆಗಳನ್ನು ನಿರ್ಮಿಸಿ : ಹೈಕೋರ್ಟ್‌ ಆದೇಶ -Vishwanews24

ಬೆಂಗಳೂರು: ‘ಗಣೇಶನ ವಿಗ್ರಹ ಅಥವಾ ಬೇರಾವುದೇ ವಿಧದ ವಿಗ್ರಹಗಳನ್ನು ಕೆರೆಗಳಲ್ಲಿ ವಿಸರ್ಜಿಸಬಾರದು. ಅದಕ್ಕಾಗಿ ಕೃತಕ ಕೆರೆಗಳನ್ನು ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಟ್ಟೆಚ್ಚರ ವಹಿಸಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ.

‘ಬಿಬಿಎಂಪಿ ವ್ಯಾಪ್ಯಿಯಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು’ ಎಂದು ಕೋರಿ ‘ಸಿಟಿಜನ್ಸ್‌ ಆ್ಯಕ್ಷನ್‌ ಗ್ರೂಪ್‌’ ಕಾರ್ಯದರ್ಶಿ ನೊಮಿತಾ ಚಾಂಡಿ, ‘ಜೆ.ಪಿ ನಗರ 4ನೇ ಹಂತದ ಡಾಲರ್ಸ್‌ ಲೇಔಟ್‌ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ’ದ ಕಾರ್ಯದರ್ಶಿ ಗುಂಡಾ ಭಟ್‌ ಮತ್ತು ‘ಸಮರ್ಪಣಾ’ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಮೇಲಿನ ಮಧ್ಯಂತರ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಎಚ್‌.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ಮುಂದುವರಿಸಿತು.

‘ಮೂರ್ತಿಗಳ ವಿಸರ್ಜನೆ ಕುರಿತು ಕೇಂದ್ರ ಪರಿಸರ ಮಾಲಿನ್ಯ ಮಂಡಳಿ ಹೊರಡಿಸಿರುವ ಮಾರ್ಗಸೂಚಿ ಅನ್ವಯ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಪಿಎಸ್‌ಸಿ) ಹೊರಡಿಸಿರುವ ಆದೇಶ ಜಾರಿಗೊಳ್ಳಬೇಕು. ಈ ಬಗೆಗಿನ ಮಾರ್ಗಸೂಚಿಗಳನ್ನು ವ್ಯಾಪಕ ಪ್ರಚಾರದ ಮೂಲಕ ಸಾರ್ವಜನಿಕರಿಗೆ ತಿಳಿಸಬೇಕು. ಒಂದು ವೇಳೆ ಯಾರಾದರೂ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕ್ರಿಮಿನಲ್ ಕ್ರಮ ಜರುಗಿಸಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿತು.

ಗಣೇಶ ಚತುರ್ಥಿ ಬಂತೆಂದರೆ ಮುಂಬೈ, ಬೆಂಗಳೂರು, ಮಂಗಳೂರು, ಹೈದರಾಬಾದ್ ಸೇರಿದಂತೆ ದೇಶದ ಹಲವಾರು ನಗರಗಳಲ್ಲಿ ಪರಿಸರ ಪ್ರೇಮಿ ಗಣೇಶ ಕೂರಿಸಿ ಎಂಬ ಕೂಗು ಕೇಳಿಬರುತ್ತದೆ. ಇದೀಗ ಪರಿಸರ ಮಾಲಿನ್ಯ ತಪ್ಪಿಸುವ ನಿಟ್ಟಿನಲ್ಲಿ, ಮೂರ್ತಿ ವಿಸರ್ಜನೆಗೆ ಕೃತಕ ಕೆರೆಗಳನ್ನು ನಿರ್ಮಿಸಬೇಕು ಎಂದು ಹೈಕೋರ್ಟ್‌ ಆದೇಶ ನೀಡಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago