ಗಣೇಶ ಚತುರ್ಥಿ ಹಬ್ಬದ ವಿಶೇಷತೆ ಹಾಗೂ ಹಿನ್ನೆಲೆ -Vishwanews24
ಗಣೇಶ ಚತುರ್ಥಿಯು ಭಾರತದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುವ ಹಬ್ಬಗಳಲ್ಲಿ ಒಂದಾಗಿದೆ. ಇದು ವಿದ್ಯೆಯ ಮತ್ತು ಜ್ಞಾನದ ಅಧಿಪತಿ, ಸಂಪತ್ತು ಮತ್ತು ಅದೃಷ್ಟದ ಅಧಿನಾಯಕನಾದ ನಮ್ಮ ಮೂಷಿಕ ವಾಹನನ ಜನನವನ್ನು ಸಾರುವ ಹಬ್ಬ. ಈ ಹಬ್ಬವನ್ನು ವಿನಾಯಕ ಚತುರ್ಥಿ ಅಥವಾ ಗಣೇಶ ಚತುರ್ಥಿ ಇಲ್ಲವೇ ಚೌತಿ ಎಂದು ಸಹ ಕರೆಯುತ್ತಾರೆ. ಇದನ್ನು ಹಿಂದೂಗಳೆಲ್ಲರು ಶ್ರದ್ಧಾ ಭಕ್ತಿಗಳಿಂದ ಆಚರಿಸುತ್ತಾರೆ.
ಇತಿಹಾಸ
ಗಣೇಶ ಚತುರ್ಥಿಯ ಆರಂಭವು ಮರಾಠರು ತಮ್ಮ ಆಳ್ವಿಕೆಯ ಉತ್ತುಂಗದಲ್ಲಿದ್ದಾಗ ಪ್ರಚಾರಕ್ಕೆ ತಂದರು. ಅದರಲ್ಲಿಯೂ ಮರಾಠರ ಶ್ರೇಷ್ಠ ರಾಜ ಛತ್ರಪತಿ ಶಿವಾಜಿಯು ಇದನ್ನು ಆಚರಿಸಲು ಆರಂಭಿಸಿದನೆಂದು ಇತಿಹಾಸ ಸಾರುತ್ತದೆ. ಗಣೇಶನ ಹಬ್ಬ ಆರಂಭಗೊಳ್ಳಲು ಹಲವಾರು ದಂತ ಕತೆಗಳ ಹಿನ್ನಲೆಯಿದೆ. ಶಿವ-ಪಾರ್ವತಿಯರ ಮಗನಾದ ಗಣೇಶನ ಹುಟ್ಟಿನ ಕುರಿತು ಹಲವಾರು ಕತೆಗಳು ಚಾಲ್ತಿಯಲ್ಲಿವೆ. ಅದರಲ್ಲಿ ಅತ್ಯಂತ ಪ್ರಸಿದ್ಧವಾದ ಕತೆ ಹೀಗಿದೆ.
ಸ್ವರ್ಣಗೌರಿಯ ಮಾನಸ ಪುತ್ರ ಈತ. ಗೌರಿ ತನ್ನ ಮೈಕೊಳೆಯಿಂದ ಆಕೃತಿಯೊಂದನ್ನು ಸೃಷ್ಟಿಸಿ ಅದಕ್ಕೆ ಜೀವತುಂಬಿ ಸ್ನಾನ ಮಾಡಲು ಹೋಗಿರುತ್ತಾಳೆ. ತಾಯಿಯ ಅಣತಿಯಂತೆ ಗಣಪ ಮನೆಯನ್ನು ಕಾಯುತ್ತಿರುತ್ತಾನೆ. ಶಿವನು ಮನೆಗೆ ಹಿಂತಿರುಗಿದಾಗ, ಗಣಪ ಅವನನ್ನು ತಡೆದು ಮನೆಯೊಳಗೆ ಹೋಗಲು ಅಡ್ಡಿಪಡಿಸುತ್ತಾನೆ.
ಇದರಿಂದ ಕುಪಿತಗೊಂಡ ಶಿವ ತನ್ನ ತ್ರಿಶೂಲದಿಂದ ಅವನ ಶಿರವನ್ನು ಕತ್ತರಿಸುವನು. ಸ್ನಾನ ಮುಗಿಸಿ ಬಂದ ಗೌರಿ ಮಗನ ಕಳೇಬರ ಕಂಡು ರೋದಿಸುತ್ತಾಳೆ. ಹೆಂಡತಿಯನ್ನು ಸಮಾಧಾನ ಪಡಿಸುವ ಸಲುವಾಗಿ ಶಿವ ತನ್ನ ಗಣಗಳನ್ನು ಕರೆದು ಉತ್ತರ ದಿಕ್ಕಿಗೆ ಯಾರಾದರೂ ತಲೆ ಹಾಕಿ ಮಲಗಿದ್ದರೆ, ಅಂತಹವರ ತಲೆಯನ್ನು ಕತ್ತರಿಸಿ ತರುವಂತೆ ಆಜ್ಞಾಪಿಸುತ್ತಾನೆ.
ಅವರು ಉತ್ತರ ದಿಕ್ಕಿನಲ್ಲಿ ಮಲಗಿದ್ದ ಮರಿಯಾನೆ ತಲೆಯನ್ನು ಕತ್ತರಿಸಿ ತರುತ್ತಾರೆ. ನಂತರ ಅದನ್ನು ಗಣಪನ ಶರೀರಕ್ಕೆ ಅಂಟಿಸುವರು. ಹೀಗಾಗಿ ಗಣಪ ಗಜಮುಖನಾಗಿ, ಗಣಗಳ ಅಧಿಪತಿ ಮತ್ತು ಮೊದಲ ಅಗ್ರಪೂಜೆಗೆ ಅರ್ಹನಾಗುತ್ತಾನೆ. ವಿಘ್ನ ವಿನಾಶಕ ವಿನಾಯಕನಾಗಿರುವನು.
ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂತಿರುಗುತ್ತಾನೆ.
ಸಾಮಾನ್ಯವಾಗಿ ಈ ಹಬ್ಬ ಭಾದ್ರಪದ ಚೌತಿಯ ದಿನದಂದು ಬರುತ್ತದೆ. ಆ ದಿನ ಯಾರೂ ಚಂದ್ರನನ್ನು ನೋಡಬಾರದು. ಗಣೇಶ ಭೂಲೋಕಕ್ಕೆ ಬಂದ ದಿನವನ್ನು ವಾರಗಟ್ಟಲೆ ಸಂಭ್ರಮದಿಂದ ಆಚರಿಸುವುದು ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಅಂದು ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.
ಆಚರಣೆ
ಗಣೇಶ ಚತುರ್ಥಿಯ ಸಿದ್ಧತೆಗಳು ಒಂದು ತಿಂಗಳ ಮೊದಲಿನಿಂದಲೆ ಆರಂಭಗೊಳ್ಳುತ್ತವೆ. ಈ ಹಬ್ಬವು ಸುಮಾರು ಹತ್ತು ದಿನಗಳ ಕಾಲ ನಡೆಯುತ್ತದೆ ( ಭಾದ್ರಪದ ಶುದ್ಧ ಚತುರ್ಥಿಯಿಂದ ಅನಂತ ಚತುರ್ದಶಿಯವರೆಗೆ). ಮೊದಲನೆ ದಿನ ಮನೆಗಳಲ್ಲಿ ಗಣೇಶನ ಮಣ್ಣಿನ ಮೂರ್ತಿಯನ್ನು ಪ್ರತಿಷ್ಟಾಪಿಸಲಾಗುತ್ತದೆ. ಮನೆಗಳನ್ನು ಹೂವಿನಿಂದ ಅಲಂಕರಿಸಲಾಗುತ್ತದೆ. ದೇವಸ್ಥಾನಗಳಲ್ಲಿ ಬೃಹತ್ ಸಂಖ್ಯೆಯಲ್ಲಿ ಭಕ್ತಾಧಿಗಳು ಪೂಜೆಯನ್ನು ಸಲ್ಲಿಸುತ್ತಾರೆ. ಪೂಜೆಗಳು, ಭಜನೆಗಳು ನಿರಂತರವಾಗಿ ನಡೆಯುತ್ತವೆ.
ಜೊತೆಗೆ ಹಬ್ಬದ ಸಂದರ್ಭದಲ್ಲಿ ಮನೆ ಮಂದಿಯೆಲ್ಲ ಒಂದಾಗಿ ಸೇರುತ್ತಾರೆ. ಸ್ಥಳೀಯ ಸಂಘ ಸಂಸ್ಥೆಗಳು ಪೆಂಡಾಲ್ಗಳನ್ನು ಹಾಕಿ ಬೃಹತ್ ಗಣಪತಿಯ ವಿಗ್ರಹಗಳನ್ನು ಇರಿಸುತ್ತಾರೆ. ಈ ಪೆಂಡಾಲ್ಗಳಲ್ಲಿ ಗಣಪತಿಯ ಉತ್ಸವವದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತವೆ.
ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಅಂತ್ಯಂತ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಕರಾವಳಿ ಪ್ರದೇಶದಲ್ಲಿ ತನ್ನದೇ ಆದ ಪರಂಪರೆ ಹೊಂದಿದೆ. ಇಲ್ಲಿ ಡೊಳ್ಳು ಕುಣಿತ,ಹುಲಿವೇಷ, ಯಕ್ಷಗಾನ ಮುಂತಾದವು ಇಲ್ಲಿನ ಗಣೇಶೋತ್ಸವಕ್ಕೆ ಮೆರಗು ತರುತ್ತದೆ. ಕುಂದಾಪುರ, ಶಿರೂರು, ಮಂಗಳೂರು, ಉಡುಪಿ ಮುಂತಾದ ಕಡೆಯಲ್ಲಿ ಸುಂದರವಾದ ಸಂಭ್ರಮದ ಗಣೇಶ ಚತುರ್ಥಿ ನಡೆಯುತ್ತದೆ.
ಹಬ್ಬದ ಅಡುಗೆಗಳು
ಈ ಹಬ್ಬದ ಸಂದರ್ಭದಲ್ಲಿ ಹಲವಾರು ಅಡುಗೆಗಳನ್ನು ಮತ್ತು ಖಾದ್ಯಗಳನ್ನು ಮಾಡಲಾಗುತ್ತದೆ. ಆದರೂ ಗಣಪತಿಯ ಪ್ರಿಯ ಪದಾರ್ಥವಾದ ಮೋದಕಕ್ಕೆ ಈ ಹಬ್ಬದಲ್ಲಿ ಹೆಚ್ಚಿನ ಪ್ರಾಧಾನ್ಯತೆ ಇರುತ್ತದೆ. ಇದು ಗಣಪತಿಯ ನೆಚ್ಚಿನ ತಿಂಡಿ. ಆದ್ದರಿಂದ ಇದನ್ನು ತಪ್ಪದೆ ಮಾಡಲಾಗುತ್ತದೆ. ಜೊತೆಗೆ ಖರ್ಜಿ ಕಾಯಿ, ಲಾಡು, ಬರ್ಫಿ ಮತ್ತು ಪೇಡಾಗಳನ್ನು ಸಹ ಮಾಡಲಾಗುತ್ತದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…