Featured

ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ. ಅಂತೆಯೇ ಗಣೇಶ ಹಬ್ಬಕ್ಕೂ ರೋಚಕ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ.

ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದೆನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೇವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದ್ರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ ಕೆಲವೆಡೆ ಚಾಲ್ತಿಯಲ್ಲಿದೆ.

ಚಂದ್ರನನ್ನು ಯಾಕೆ ನೋಡಬಾರದು?:
ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂದಿರುಗುತ್ತಾನೆ. ಗಣಪತಿ ತನ್ನ ವಾಹನವಾದ ಇಲಿಯ ಮೇಲೆ ಕುಳಿತುಕೊಂಡು ಚಂದ್ರಲೋಕಕ್ಕೆ ಬಂದನು. ಈ ವೇಳೆ ಚಂದ್ರನು ಗಣೇಶನನ್ನು ನೋಡುತ್ತಾನೆ. ಸರ್ವಾಂಗ ಸುಂದರನಾಗಿರುವ ಚಂದ್ರ, ಗಣಪತಿಯ ಆನೆ ಮುಖು, ಡೊಳ್ಳುಹೊಟ್ಟೆ ಮತ್ತು ವಾಹನ ಇಲಿಯನ್ನು ನೋಡಿ ಹಾಸ್ಯ ಮಾಡಿ ನಕ್ಕು ಬಿಡುತ್ತಾನೆ. ಇದನ್ನು ಕಂಡ ಗಣಪತಿಗೆ ಸಿಟ್ಟು ನೆತ್ತಿಗೇರುತ್ತೆ.

ಅಲ್ಲದೇ `ಎಲೈ ಚಂದ್ರನೇ ನಿನಗೆ ನಿನ್ನ ಸೌಂದರ್ಯದ ಮದ ಹೆಚ್ಚಾಗಿದೆ. ಎಲ್ಲ ಲೋಕಗಳಲ್ಲೂ ಪೂಜಿಸುತ್ತಿರುವ ನನ್ನನ್ನು ನೀನು ಮಾತ್ರ ಹಾಸ್ಯ ಮಾಡಿ ನಗುತ್ತಿರುವೆಯಾ? ಮೂರ್ಖ.. ಇದೋ.. ನಿನ್ನ ಅಹಂಕಾರಕ್ಕೆ ತಕ್ಕ ಪ್ರತಿಫಲ ಅನುಭವಿಸು.. ನಿನ್ನ ಅಹಂಕಾರಕ್ಕೂ ಅಜ್ಞಾನಕ್ಕೂ ಕಾರಣವಾಗಿರುವ ನಿನ್ನ ಸೌಂದರ್ಯ ಕುಗ್ಗಿ ಹೋಗಲಿ. ಇನ್ನು ಮುಂದೆ ನನ್ನ ಹುಟ್ಟಿದ ದಿನವಾದ ಭಾದ್ರಪದ ಚೌತಿಯಂದು ನಿನ್ನನ್ನು ನೋಡುವವರು ಸುಳ್ಳು ಅಪವಾದಾಕ್ಕೆ ಗುರಿಯಾಗಲಿ’ ಅಂತ ಗಣಪತಿ ಚಂದ್ರನಿಗೆ ಶಾಪ ಹಾಕುತ್ತಾನೆ.

 

ಗಣಪತಿಯ ಶಾಪದಿಂದ ಚಂದ್ರನ ಅಹಂಕಾರವೆಲ್ಲ ಕೆಲವೇ ಕ್ಷಣಗಳಲ್ಲಿ ಇಳಿದು ಹೋಯಿತು. ತನ್ನ ತಪ್ಪಿನ ಅರಿವಾಗಿ ಪಶ್ಚತ್ತಾಪ ಪಡುತ್ತಾ ಗಣಪತಿ ಮುಂದೆ ಕೈ ಮುಗಿದು ಕ್ಷಮೆ ಕೇಳುತ್ತಾನೆ. `ಸ್ವಾಮಿ ನನ್ನ ಅಜ್ಞಾನವನ್ನು ಮನ್ನಿಸು. ನನಗೆ ಕೊಟ್ಟ ಶಾಪವನನ್ನು ವಾಪಸ್ ತೆಗೆದುಕೊ’ ಅಂತ ಗಣಪತಿ ಮುಂದೆ ಚಂದ್ರ ಅಂಗಲಾಚಿಕೊಳ್ಳುತ್ತಾನೆ.

ಚಂದ್ರನ ಮೊರೆಗೆ ಗಣಪತಿ ಮನಸ್ಸು ಕರಗಿ ಶಾಂತನಾಗುತ್ತಾನೆ. ಹೀಗಾಗಿ ಚಂದ್ರನನ್ನು ಸಂತೈಸಿ `ನಿನಗೆ ನಿನ್ನ ತಪ್ಪಿನ ಅರಿವಾಗಿದೆ. ನಿನ್ನ ಅಹಂಕಾರ ಇಳಿಸುವುದೇ ನನಗೆ ಮುಖ್ಯವಾಗಿತ್ತು. ಆದ್ರೆ ಈವಾಗ ಏನ್ ಮಾಡಿದ್ರೂ ನನ್ನ ಶಾಪ ಯಾವತ್ತಿಗೂ ಸುಳ್ಳಾಗದು. ಆದ್ರೆ ಚೌತಿಯಂದು ನಿನ್ನನ್ನು ನೋಡಿ ಅಪವಾದಕ್ಕೆ ಗುರಿಯಾದವರು ಇತರ ತಿಂಗಳುಗಳ ಕೃಷ್ಣಪಕ್ಷದ ಚತುರ್ಥಿಯಂದು ನಿನ್ನನ್ನು ನೋಡಿದ ನಂತರವೇ ಎಲ್ಲರೂ ಊಟಮಾಡಲಿ. ಸಂಕಷ್ಟ ಚತುರ್ಥಿಯಂದು ನಿನ್ನ ದರ್ಶನವಾಗದೆ ಯಾರೂ ಭೋಜನವನ್ನು ಸ್ವೀಕರಿಸುವುದಿಲ್ಲ’ ಅಂತ ಗಣಪತಿ ಹೇಳುತ್ತಾನೆ. ಗಣಪತಿಯ ಮಾತು ಕೇಳಿ ಚಂದ್ರ ಸಂತಸ ವ್ಯಕ್ತಪಡುತ್ತಾನೆ.

ಈ ಕಾರಣದಿಂದ ಚೌತಿಯಂದು ಚಂದ್ರನನ್ನು ನೋಡಬಾರದು ಅಂತ ಹಿರಿಯರು ಹೇಳುತ್ತಾರೆ. ಈ ನಂಬಿಕೆ ಇಂದಿಗೂ ಕೆಲವು ಕಡೆಗಳಲ್ಲಿ ಇದ್ದು, ರಾತ್ರಿಯಾಗುತ್ತಿದ್ದಂತೆಯೇ ಹೊರಗಡೆ ತೆರಳುವ ತಮ್ಮ ಮಕ್ಕಳಿಗೆ ಹಿರಿಯರು ತಪ್ಪಿಯೂ ಇಂದು ಆಕಾಶ ನೋಡಬೇಡ ಅಂತ ಹೇಳುತ್ತಾರೆ. ಒಟ್ಟಿನಲ್ಲಿ ದೇಶದಾದ್ಯಂತ ಗಣೇಶ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಬೆಳ್ಳಿ ಅಥವಾ ಮಣ್ಣನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವೃತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಮೊದಲಾದ ಸಿಹಿತಿಂಡಿ ಮಾಡಿ ಗಣಪತಿಗೆ ನೈವೇದ್ಯ ಮಾಡಲಾಗುತ್ತದೆ. ಅಲ್ಲದೇ ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.

 

ಜಾಹಿರಾತು : ಪಂಡಿತ್ ಸುದರ್ಶನ್ ಭಟ್: 9663542672

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago