Featured

ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ. ಅಂತೆಯೇ ಗಣೇಶ ಹಬ್ಬಕ್ಕೂ ರೋಚಕ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ.

ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದೆನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೇವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದ್ರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ ಕೆಲವೆಡೆ ಚಾಲ್ತಿಯಲ್ಲಿದೆ.

ಚಂದ್ರನನ್ನು ಯಾಕೆ ನೋಡಬಾರದು?:
ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂದಿರುಗುತ್ತಾನೆ. ಗಣಪತಿ ತನ್ನ ವಾಹನವಾದ ಇಲಿಯ ಮೇಲೆ ಕುಳಿತುಕೊಂಡು ಚಂದ್ರಲೋಕಕ್ಕೆ ಬಂದನು. ಈ ವೇಳೆ ಚಂದ್ರನು ಗಣೇಶನನ್ನು ನೋಡುತ್ತಾನೆ. ಸರ್ವಾಂಗ ಸುಂದರನಾಗಿರುವ ಚಂದ್ರ, ಗಣಪತಿಯ ಆನೆ ಮುಖು, ಡೊಳ್ಳುಹೊಟ್ಟೆ ಮತ್ತು ವಾಹನ ಇಲಿಯನ್ನು ನೋಡಿ ಹಾಸ್ಯ ಮಾಡಿ ನಕ್ಕು ಬಿಡುತ್ತಾನೆ. ಇದನ್ನು ಕಂಡ ಗಣಪತಿಗೆ ಸಿಟ್ಟು ನೆತ್ತಿಗೇರುತ್ತೆ.

ಅಲ್ಲದೇ `ಎಲೈ ಚಂದ್ರನೇ ನಿನಗೆ ನಿನ್ನ ಸೌಂದರ್ಯದ ಮದ ಹೆಚ್ಚಾಗಿದೆ. ಎಲ್ಲ ಲೋಕಗಳಲ್ಲೂ ಪೂಜಿಸುತ್ತಿರುವ ನನ್ನನ್ನು ನೀನು ಮಾತ್ರ ಹಾಸ್ಯ ಮಾಡಿ ನಗುತ್ತಿರುವೆಯಾ? ಮೂರ್ಖ.. ಇದೋ.. ನಿನ್ನ ಅಹಂಕಾರಕ್ಕೆ ತಕ್ಕ ಪ್ರತಿಫಲ ಅನುಭವಿಸು.. ನಿನ್ನ ಅಹಂಕಾರಕ್ಕೂ ಅಜ್ಞಾನಕ್ಕೂ ಕಾರಣವಾಗಿರುವ ನಿನ್ನ ಸೌಂದರ್ಯ ಕುಗ್ಗಿ ಹೋಗಲಿ. ಇನ್ನು ಮುಂದೆ ನನ್ನ ಹುಟ್ಟಿದ ದಿನವಾದ ಭಾದ್ರಪದ ಚೌತಿಯಂದು ನಿನ್ನನ್ನು ನೋಡುವವರು ಸುಳ್ಳು ಅಪವಾದಾಕ್ಕೆ ಗುರಿಯಾಗಲಿ’ ಅಂತ ಗಣಪತಿ ಚಂದ್ರನಿಗೆ ಶಾಪ ಹಾಕುತ್ತಾನೆ.

 

ಗಣಪತಿಯ ಶಾಪದಿಂದ ಚಂದ್ರನ ಅಹಂಕಾರವೆಲ್ಲ ಕೆಲವೇ ಕ್ಷಣಗಳಲ್ಲಿ ಇಳಿದು ಹೋಯಿತು. ತನ್ನ ತಪ್ಪಿನ ಅರಿವಾಗಿ ಪಶ್ಚತ್ತಾಪ ಪಡುತ್ತಾ ಗಣಪತಿ ಮುಂದೆ ಕೈ ಮುಗಿದು ಕ್ಷಮೆ ಕೇಳುತ್ತಾನೆ. `ಸ್ವಾಮಿ ನನ್ನ ಅಜ್ಞಾನವನ್ನು ಮನ್ನಿಸು. ನನಗೆ ಕೊಟ್ಟ ಶಾಪವನನ್ನು ವಾಪಸ್ ತೆಗೆದುಕೊ’ ಅಂತ ಗಣಪತಿ ಮುಂದೆ ಚಂದ್ರ ಅಂಗಲಾಚಿಕೊಳ್ಳುತ್ತಾನೆ.

ಚಂದ್ರನ ಮೊರೆಗೆ ಗಣಪತಿ ಮನಸ್ಸು ಕರಗಿ ಶಾಂತನಾಗುತ್ತಾನೆ. ಹೀಗಾಗಿ ಚಂದ್ರನನ್ನು ಸಂತೈಸಿ `ನಿನಗೆ ನಿನ್ನ ತಪ್ಪಿನ ಅರಿವಾಗಿದೆ. ನಿನ್ನ ಅಹಂಕಾರ ಇಳಿಸುವುದೇ ನನಗೆ ಮುಖ್ಯವಾಗಿತ್ತು. ಆದ್ರೆ ಈವಾಗ ಏನ್ ಮಾಡಿದ್ರೂ ನನ್ನ ಶಾಪ ಯಾವತ್ತಿಗೂ ಸುಳ್ಳಾಗದು. ಆದ್ರೆ ಚೌತಿಯಂದು ನಿನ್ನನ್ನು ನೋಡಿ ಅಪವಾದಕ್ಕೆ ಗುರಿಯಾದವರು ಇತರ ತಿಂಗಳುಗಳ ಕೃಷ್ಣಪಕ್ಷದ ಚತುರ್ಥಿಯಂದು ನಿನ್ನನ್ನು ನೋಡಿದ ನಂತರವೇ ಎಲ್ಲರೂ ಊಟಮಾಡಲಿ. ಸಂಕಷ್ಟ ಚತುರ್ಥಿಯಂದು ನಿನ್ನ ದರ್ಶನವಾಗದೆ ಯಾರೂ ಭೋಜನವನ್ನು ಸ್ವೀಕರಿಸುವುದಿಲ್ಲ’ ಅಂತ ಗಣಪತಿ ಹೇಳುತ್ತಾನೆ. ಗಣಪತಿಯ ಮಾತು ಕೇಳಿ ಚಂದ್ರ ಸಂತಸ ವ್ಯಕ್ತಪಡುತ್ತಾನೆ.

ಈ ಕಾರಣದಿಂದ ಚೌತಿಯಂದು ಚಂದ್ರನನ್ನು ನೋಡಬಾರದು ಅಂತ ಹಿರಿಯರು ಹೇಳುತ್ತಾರೆ. ಈ ನಂಬಿಕೆ ಇಂದಿಗೂ ಕೆಲವು ಕಡೆಗಳಲ್ಲಿ ಇದ್ದು, ರಾತ್ರಿಯಾಗುತ್ತಿದ್ದಂತೆಯೇ ಹೊರಗಡೆ ತೆರಳುವ ತಮ್ಮ ಮಕ್ಕಳಿಗೆ ಹಿರಿಯರು ತಪ್ಪಿಯೂ ಇಂದು ಆಕಾಶ ನೋಡಬೇಡ ಅಂತ ಹೇಳುತ್ತಾರೆ. ಒಟ್ಟಿನಲ್ಲಿ ದೇಶದಾದ್ಯಂತ ಗಣೇಶ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಬೆಳ್ಳಿ ಅಥವಾ ಮಣ್ಣನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವೃತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಮೊದಲಾದ ಸಿಹಿತಿಂಡಿ ಮಾಡಿ ಗಣಪತಿಗೆ ನೈವೇದ್ಯ ಮಾಡಲಾಗುತ್ತದೆ. ಅಲ್ಲದೇ ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.

 

ಜಾಹಿರಾತು : ಪಂಡಿತ್ ಸುದರ್ಶನ್ ಭಟ್: 9663542672

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago