ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ. ನಾವು ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು. ಗಣಪತಿ ಉತ್ಸವ ಯಶಸ್ವಿಯಾಗಿ ನಡೆಸಬೇಕು ಎನ್ನುವ ವಿಚಾರದಲ್ಲಿ ಯಾವ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಿಂದುತ್ವದ ಸಿದ್ದಾಂತವನ್ನು ಯಾವತ್ತೂ ಒಪ್ಪುವವರೂ ಕೂಡ. ಗಣಪತಿ ಉತ್ಸವವನ್ನು ನಡೆಸಿಯೇ ನಡೆಸುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಆದರೆ ಕೋವಿಡ್ ಸಂದರ್ಭದಲ್ಲಿ ಹೇಗೆ ನಡೆಸಬೇಕು, ಎಷ್ಟು ಜನ ಸೇರಬೇಕು ಎಂದು ಗಮನಿಸಬೇಕು. ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ನೀತಿ- ನಿಯಮಗಳನ್ನು ತಿಳಿಸಲಿದೆ. ಗಣೇಶೋತ್ಸವ ಯಶಸ್ವಿಯಾಗಿ ನಡೆಯುತ್ತದೆ. ಸರ್ಕಾರ ಕೂಡ ಅದಕ್ಕೆ ಪೂರ್ಣ ಬೆಂಬಲ ಕೊಡುತ್ತದೆ ಎಂದು ನನಗೆ ಪೂರ್ಣ ನಂಬಿಕೆಯಿದೆ. ರಾಜ್ಯದ ಜನ ಕೂಡ ಅದನ್ನು ಗಮನಿಸುತ್ತಾರೆ ಎಂದರು.
ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ಜನ ಸೇರಿದ್ದನ್ನು ನಾನು ಒಪ್ಪಲ್ಲ. ತುಂಬಾ ಸ್ಪಷ್ಟವಾಗಿ ಬಿಜೆಪಿಯ ಒಬ್ಬ ಮಂತ್ರಿಯಾಗಿ ಹೇಳಲು ಇಷ್ಟ ಪಡುತ್ತೇನೆ. ನಾನು ಒಪ್ಪಲ್ಲ, ಹಾಗೇಯೇ ಗಣೇಶೋತ್ಸವ ನಿಲ್ಲಿಸಬೇಕು ಎಂಬುದನ್ನು ನಾನು ಒಪ್ಪಲ್ಲ. ಆರೋಗ್ಯವೂ ಮುಖ್ಯ. ಅದರ ಕಡೆಗೂ ಗಮನ ಕೊಡಬೇಕು ಎಂದು ಸಚಿವ ಈಶ್ವರಪ್ಪ ಹೇಳಿದರು
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…