Featured

ಗಣೇಶ ಹಬ್ಬ ಮಾಡಿಯೇ ಮಾಡುತ್ತೇವೆ : ಕೆ.ಎಸ್.ಈಶ್ವರಪ್ಪ -Vishwanews24

ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು,

ಗಣೇಶ ಹಬ್ಬ ಮಾಡಿಯೇ ಮಾಡುತ್ತೇವೆ..

ಗಣೇಶೋತ್ಸವ ನಿಲ್ಲಿಸಬೇಕು ಎಂಬುದನ್ನು ನಾನು ಒಪ್ಪಲ್ಲ…

ಸರ್ಕಾರ ಕೂಡ ಅದಕ್ಕೆ ಪೂರ್ಣ ಬೆಂಬಲ ಕೊಡುತ್ತದೆ ಎಂದು ನನಗೆ ಪೂರ್ಣ ನಂಬಿಕೆಯಿದೆ..

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ‌. ನಾವು ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು. ಗಣಪತಿ ಉತ್ಸವ ಯಶಸ್ವಿಯಾಗಿ ನಡೆಸಬೇಕು ಎನ್ನುವ ವಿಚಾರದಲ್ಲಿ ಯಾವ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಿಂದುತ್ವದ ಸಿದ್ದಾಂತವನ್ನು ಯಾವತ್ತೂ ಒಪ್ಪುವವರೂ ಕೂಡ‌. ಗಣಪತಿ ಉತ್ಸವವನ್ನು ನಡೆಸಿಯೇ ನಡೆಸುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಆದರೆ ಕೋವಿಡ್ ಸಂದರ್ಭದಲ್ಲಿ ಹೇಗೆ ನಡೆಸಬೇಕು, ಎಷ್ಟು ಜನ ಸೇರಬೇಕು ಎಂದು ಗಮನಿಸಬೇಕು. ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ನೀತಿ- ನಿಯಮಗಳನ್ನು ತಿಳಿಸಲಿದೆ. ಗಣೇಶೋತ್ಸವ ಯಶಸ್ವಿಯಾಗಿ ನಡೆಯುತ್ತದೆ. ಸರ್ಕಾರ ಕೂಡ ಅದಕ್ಕೆ ಪೂರ್ಣ ಬೆಂಬಲ ಕೊಡುತ್ತದೆ ಎಂದು ನನಗೆ ಪೂರ್ಣ ನಂಬಿಕೆಯಿದೆ. ರಾಜ್ಯದ ಜನ ಕೂಡ ಅದನ್ನು ಗಮನಿಸುತ್ತಾರೆ ಎಂದರು.

ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ಜನ ಸೇರಿದ್ದನ್ನು ನಾನು ಒಪ್ಪಲ್ಲ. ತುಂಬಾ ಸ್ಪಷ್ಟವಾಗಿ ಬಿಜೆಪಿಯ ಒಬ್ಬ ಮಂತ್ರಿಯಾಗಿ ಹೇಳಲು ಇಷ್ಟ ಪಡುತ್ತೇನೆ. ನಾನು ಒಪ್ಪಲ್ಲ, ಹಾಗೇಯೇ ಗಣೇಶೋತ್ಸವ ನಿಲ್ಲಿಸಬೇಕು ಎಂಬುದನ್ನು ನಾನು ಒಪ್ಪಲ್ಲ. ಆರೋಗ್ಯವೂ ಮುಖ್ಯ. ಅದರ ಕಡೆಗೂ ಗಮನ ಕೊಡಬೇಕು ಎಂದು ಸಚಿವ ಈಶ್ವರಪ್ಪ ಹೇಳಿದರು

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

1 hour ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

1 hour ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

3 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

4 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

5 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

5 hours ago