Featured

ಗದಗ:  ಧಾರಾಕಾರ ಮಳೆ – ಹಳ್ಳದಲ್ಲಿ ಕೊಚ್ಚಿ ಹೋದ ಯುವಕರು – vishwanews24

ಗದಗ:  ಧಾರಾಕಾರ ಮಳೆ – ಹಳ್ಳದಲ್ಲಿ ಕೊಚ್ಚಿ ಹೋದ ಯುವಕರು – ಓರ್ವನ ಶವ ಪತ್ತೆ ; ಇನ್ನೋರ್ವನಿಗಾಗಿ ಮುಂದುವರಿದ ಶೋಧ ಕಾರ್ಯ

ಗದಗ: ಸುರಿದ ಧಾರಾಕಾರ ಮಳೆಯಿಂದಾಗಿ ಹಳ್ಳದ ನೀರಲ್ಲಿ ಯುವಕರಿಬ್ಬರು ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ನರಗುಂದ  ತಾಲೂಕಿನ ಹುಣಸಿಕಟ್ಟಿಬಳಿ ನಡೆದಿದೆ.

ಓರ್ವ ಯುವಕನ ಶವ ಪತ್ತೆಯಾಗಿದ್ದು, 25 ವರ್ಷದ ಶಿವಪ್ಪ ಅಶೋಕಪ್ಪ ಅವರಾದಿ ಎಂದು ಗುರುತಿಸಲಾಗಿದೆ. ಹಾಗೂ 26 ವರ್ಷದ ಮಣಿಕಂಠ ಅಶೋಕ ಮಲ್ಲಾಪೂರ ಎಂಬುವವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಜಿಲ್ಲೆಯಲ್ಲಿ ಭಾನುವಾರ ಸಾಯಂಕಾಲದಿಂದ ಧಾರಾಕಾರ ಮಳೆ ಸುರಿದಿದೆ. ಮಣಿಕಂಠನ ಹೆಂಡತಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಸುರಿದ ಮಳೆಯಿಂದಾಗಿ ಹೆಂಡತಿಗೆ ಊರಿಗೆ ಬರಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಪತ್ನಿಯನ್ನು ಕರೆತರಲು ತನ್ನ ಗೆಳೆಯ ಶಿವಪ್ಪನನ್ನು ಕರೆದುಕೊಂಡು ಹೋಗಿದ್ದ. ಹುಣಸಿಕಟ್ಟಿಯಿಂದ ನರಗುಂದಕ್ಕೆ ಬೈಕಿನಲ್ಲಿ ಹೊರಟಿದ್ದರು.

ಮಾರ್ಗ ಮಧ್ಯೆ ಒಡ್ಡಿನ ಹಳ್ಳವೊಂದು ತುಂಬಿ ಹರಿಯುತ್ತಿತ್ತು. ನೀರಿನ ರಭಸ ಲೆಕ್ಕಿಸದೇ ಹಳ್ಳ ದಾಟಲು ಮುಂದಾಗಿದ್ದ ವೇಳೆ ಹಳ್ಳದ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವ ಶವವಾಗಿ ಪತ್ತೆಯಾಗಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸದ್ಯ ಸ್ಥಳಕ್ಕೆ ನರಗುಂದ ಪೋಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

1 hour ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

22 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

22 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

22 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

23 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

24 hours ago