ಗದಗ: ಸುರಿದ ಧಾರಾಕಾರ ಮಳೆಯಿಂದಾಗಿ ಹಳ್ಳದ ನೀರಲ್ಲಿ ಯುವಕರಿಬ್ಬರು ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿಬಳಿ ನಡೆದಿದೆ.
ಓರ್ವ ಯುವಕನ ಶವ ಪತ್ತೆಯಾಗಿದ್ದು, 25 ವರ್ಷದ ಶಿವಪ್ಪ ಅಶೋಕಪ್ಪ ಅವರಾದಿ ಎಂದು ಗುರುತಿಸಲಾಗಿದೆ. ಹಾಗೂ 26 ವರ್ಷದ ಮಣಿಕಂಠ ಅಶೋಕ ಮಲ್ಲಾಪೂರ ಎಂಬುವವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಜಿಲ್ಲೆಯಲ್ಲಿ ಭಾನುವಾರ ಸಾಯಂಕಾಲದಿಂದ ಧಾರಾಕಾರ ಮಳೆ ಸುರಿದಿದೆ. ಮಣಿಕಂಠನ ಹೆಂಡತಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಸುರಿದ ಮಳೆಯಿಂದಾಗಿ ಹೆಂಡತಿಗೆ ಊರಿಗೆ ಬರಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಪತ್ನಿಯನ್ನು ಕರೆತರಲು ತನ್ನ ಗೆಳೆಯ ಶಿವಪ್ಪನನ್ನು ಕರೆದುಕೊಂಡು ಹೋಗಿದ್ದ. ಹುಣಸಿಕಟ್ಟಿಯಿಂದ ನರಗುಂದಕ್ಕೆ ಬೈಕಿನಲ್ಲಿ ಹೊರಟಿದ್ದರು.
ಮಾರ್ಗ ಮಧ್ಯೆ ಒಡ್ಡಿನ ಹಳ್ಳವೊಂದು ತುಂಬಿ ಹರಿಯುತ್ತಿತ್ತು. ನೀರಿನ ರಭಸ ಲೆಕ್ಕಿಸದೇ ಹಳ್ಳ ದಾಟಲು ಮುಂದಾಗಿದ್ದ ವೇಳೆ ಹಳ್ಳದ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವ ಶವವಾಗಿ ಪತ್ತೆಯಾಗಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸದ್ಯ ಸ್ಥಳಕ್ಕೆ ನರಗುಂದ ಪೋಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…