ಗದಗ: ಸುರಿದ ಧಾರಾಕಾರ ಮಳೆಯಿಂದಾಗಿ ಹಳ್ಳದ ನೀರಲ್ಲಿ ಯುವಕರಿಬ್ಬರು ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿಬಳಿ ನಡೆದಿದೆ.
ಓರ್ವ ಯುವಕನ ಶವ ಪತ್ತೆಯಾಗಿದ್ದು, 25 ವರ್ಷದ ಶಿವಪ್ಪ ಅಶೋಕಪ್ಪ ಅವರಾದಿ ಎಂದು ಗುರುತಿಸಲಾಗಿದೆ. ಹಾಗೂ 26 ವರ್ಷದ ಮಣಿಕಂಠ ಅಶೋಕ ಮಲ್ಲಾಪೂರ ಎಂಬುವವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಜಿಲ್ಲೆಯಲ್ಲಿ ಭಾನುವಾರ ಸಾಯಂಕಾಲದಿಂದ ಧಾರಾಕಾರ ಮಳೆ ಸುರಿದಿದೆ. ಮಣಿಕಂಠನ ಹೆಂಡತಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಸುರಿದ ಮಳೆಯಿಂದಾಗಿ ಹೆಂಡತಿಗೆ ಊರಿಗೆ ಬರಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಪತ್ನಿಯನ್ನು ಕರೆತರಲು ತನ್ನ ಗೆಳೆಯ ಶಿವಪ್ಪನನ್ನು ಕರೆದುಕೊಂಡು ಹೋಗಿದ್ದ. ಹುಣಸಿಕಟ್ಟಿಯಿಂದ ನರಗುಂದಕ್ಕೆ ಬೈಕಿನಲ್ಲಿ ಹೊರಟಿದ್ದರು.
ಮಾರ್ಗ ಮಧ್ಯೆ ಒಡ್ಡಿನ ಹಳ್ಳವೊಂದು ತುಂಬಿ ಹರಿಯುತ್ತಿತ್ತು. ನೀರಿನ ರಭಸ ಲೆಕ್ಕಿಸದೇ ಹಳ್ಳ ದಾಟಲು ಮುಂದಾಗಿದ್ದ ವೇಳೆ ಹಳ್ಳದ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವ ಶವವಾಗಿ ಪತ್ತೆಯಾಗಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸದ್ಯ ಸ್ಥಳಕ್ಕೆ ನರಗುಂದ ಪೋಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…