ಗದಗ:  ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಅವಕಾಶ: 5 ಶಿಕ್ಷಕರು, ಇಬ್ಬರು ಮುಖ್ಯ ಅಧೀಕ್ಷಕರು ಅಮಾನತು – Vishwanews24

Featured, ರಾಜ್ಯ ನ್ಯೂಸ್

ಗದಗ:  ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಅವಕಾಶ: 5 ಶಿಕ್ಷಕರು, ಇಬ್ಬರು ಮುಖ್ಯ ಅಧೀಕ್ಷಕರು ಅಮಾನತು – Vishwanews24

ಗದಗ: ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಕೊಠಡಿ ಪ್ರವೇಶಿಸಲು ಅವಕಾಶ ನೀಡಿದ್ದ ಶಿಕ್ಷಕರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಮಂಗಳವಾರ ಅಮಾನತು ಮಾಡಿ ಆದೇಶಿಸಲಾಗಿದೆ.

‘ನ್ಯಾಯಾಲಯದ ತೀರ್ಪು ಉಲ್ಲಂಘಿಸಿ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿ ಕೊಠಡಿ ಒಳಗೆ ಬರಲು ಅವಕಾಶ ನೀಡಿದ ಗದುಗಿನ ಸಿ.ಎಸ್‌.ಪಾಟೀಲ ಬಾಲಕರ ಪ್ರೌಢಶಾಲೆ ಹಾಗೂ ಸಿ.ಎಸ್‌.ಪಾಟೀಲ ಬಾಲಕಿಯರ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕರಾದ ಎಸ್‌.ಯು.ಹೊಕ್ಕಳದ, ಎಸ್‌.ಎಂ.ಪತ್ತಾರ ಎಸ್‌.ಜಿ.ಗೋಡಕೆ, ಎಸ್‌.ಎಸ್‌.ಗುಜಮಾಗಡಿ, ವಿ.ಎನ್‌.ಕಿವುಡರ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಗದಗ ಡಿಡಿಪಿಐ ಬಸವಲಿಂಗಪ್ಪ ಜಿ.ಎಂ. ತಿಳಿಸಿದ್ದಾರೆ.

ಈ ಎರಡೂ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಬಿ.ಭಜಂತ್ರಿ ಮತ್ತು ಬಿ.ಎಸ್‌.ಹೊನಗುಡಿ ಅವರನ್ನು ಸಹ ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಉಡುಪಿ : ಪ್ರಥಮ ಪಿಯುಸಿ ಪರೀಕ್ಷೆ : ಹಿಜಾಬ್ ಧರಿಸದೇ ಪರೀಕ್ಷೆ ಬರೆಯುವುದಿಲ್ಲ ಎಂದು ವಾಪಸಾದ 40 ವಿದ್ಯಾರ್ಥಿನಿಯರು – Vishwanews24

Leave a Reply