ಬೆಂಗಳೂರು: ಮುಂದಿನ ವಾರ ಸತತ ನಾಲ್ಕು ದಿನ ಬ್ಯಾಂಕ್ ಕಾರ್ಯನಿರ್ವಹಿಸೋದಿಲ್ಲ. ಡಿಸೆಂಬರ್ 16, 17, 18 ಹಾಗೂ 19ರಂದು ಬ್ಯಾಂಕುಗಳಿಗೆ ರಜೆಯಿದೆ. ಹೀಗಾಗಿ ಈ ದಿನಗಳಂದು ಯಾವುದೇ ಬ್ಯಾಂಕ್ ಕೆಲಸಗಳನ್ನಿಟ್ಟುಕೊಳ್ಳಬೇಡಿ. ಆದ್ರೆ ಈ ದಿನಗಳಲ್ಲಿ ಎಲ್ಲ ಬ್ಯಾಂಕಿಂಗ್ ಆನ್ಲೈನ್ ವಹಿವಾಟುಗಳು ಎಂದಿನಂತೆ ನಡೆಯಲಿವೆ.
ಮುಂದಿನ ವಾರ ಬ್ಯಾಂಕ್ ರಜೆಗಳ ಪಟ್ಟಿ
* ಡಿಸೆಂಬರ್ 16: ಬ್ಯಾಂಕ್ ಖಾಸಗೀಕರಣದ ವಿರುದ್ಧ ಬ್ಯಾಂಕ್ ಯೂನಿಯನ್ ಮುಷ್ಕರ
* ಡಿಸೆಂಬರ್ 17: ಬ್ಯಾಂಕ್ ಖಾಸಗೀಕರಣದ ವಿರುದ್ಧ ಬ್ಯಾಂಕ್ ಯೂನಿಯನ್ ಮುಷ್ಕರ
* ಡಿಸೆಂಬರ್ 18: ಯು ಸೊಸೊ ಥಾಮ್ ಪುಣ್ಯ ಸ್ಮರಣೆ/ಗುರುಘಿಸಿದಾಸ್ ಜಯಂತಿ
* ಡಿಸೆಂಬರ್ 19: ಭಾನುವಾರ
ಸಾರ್ವಜನಿಕ ವಲಯದ 2 ಬ್ಯಾಂಕುಗಳ ಖಾಸಗೀಕರಣಕ್ಕೆ ಸಂಬಂಧಿಸಿ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಇಚ್ಛಿಸಿರೋ ಮಸೂದೆಯನ್ನು ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯುನಿಯನ್ಸ್ ಡಿಸೆಂಬರ್ 16 ಹಾಗೂ 17ರಂದು ಎರಡು ದಿನಗಳ ದೇಶವ್ಯಾಪ್ತಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಇದಕ್ಕೆ ಸಂಬಂಧಿಸಿ ಭಾರತೀಯ ಬ್ಯಾಂಕ್ ಗಳ ಸಂಘಟನೆಗೆ ಯುನೈಟೆಡ್ ಫೋರಂ ನೋಟಿಸ್ ಕೂಡ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಗುರುವಾರ ಹಾಗೂ ಶುಕ್ರವಾರ ಬ್ಯಾಂಕುಗಳು ಮುಚ್ಚಿರಲಿವೆ. ಈ ವರ್ಷ ಫೆಬ್ರವರಿಯಲ್ಲಿ 2021-22ನೇ ಸಾಲಿನ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಾರ್ವಜನಿಕ ವಲಯದ ಎರಡು ಬ್ಯಾಂಕ್ ಗಳ ಖಾಸಗೀಕರಣದ ಬಗ್ಗೆ ಪ್ರಸ್ತಾಪಿಸಿದ್ದರು.1.75ಲಕ್ಷ ಕೋಟಿ ರೂಪಾಯಿ ಆದಾಯ ಗಳಿಸೋ ಉದ್ದೇಶದಿಂದ ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣವನ್ನು ಘೋಷಿಸಿದ್ದರು. ಸರ್ಕಾರದ ಈ ಖಾಸಗೀಕರಣ ನೀತಿಯನ್ನು ವಿರೋಧಿಸಿ ಚಳವಳಿ ನಡೆಸಲು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯುನಿಯನ್ಸ್ ನಿರ್ಧರಿಸಿದೆ.
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…