Featured

ಗಮನಿಸಿ : ಮುಂದಿನ ವಾರ  ನಾಲ್ಕು ದಿನ ಬ್ಯಾಂಕ್ ಕಾರ್ಯನಿರ್ವಹಿಸೋದಿಲ್ಲ – Vishwanews24

ಗಮನಿಸಿ : ಮುಂದಿನ ವಾರ  ನಾಲ್ಕು ದಿನ ಬ್ಯಾಂಕ್ ಕಾರ್ಯನಿರ್ವಹಿಸೋದಿಲ್ಲ – Vishwanews24

ಬೆಂಗಳೂರು:  ಮುಂದಿನ ವಾರ ಸತತ ನಾಲ್ಕು ದಿನ ಬ್ಯಾಂಕ್  ಕಾರ್ಯನಿರ್ವಹಿಸೋದಿಲ್ಲ. ಡಿಸೆಂಬರ್ 16, 17, 18 ಹಾಗೂ 19ರಂದು ಬ್ಯಾಂಕುಗಳಿಗೆ ರಜೆಯಿದೆ. ಹೀಗಾಗಿ ಈ ದಿನಗಳಂದು ಯಾವುದೇ ಬ್ಯಾಂಕ್ ಕೆಲಸಗಳನ್ನಿಟ್ಟುಕೊಳ್ಳಬೇಡಿ. ಆದ್ರೆ ಈ ದಿನಗಳಲ್ಲಿ ಎಲ್ಲ ಬ್ಯಾಂಕಿಂಗ್ ಆನ್ಲೈನ್ ವಹಿವಾಟುಗಳು ಎಂದಿನಂತೆ ನಡೆಯಲಿವೆ.

ಮುಂದಿನ ವಾರ ಬ್ಯಾಂಕ್‌ ರಜೆಗಳ ಪಟ್ಟಿ

* ಡಿಸೆಂಬರ್‌ 16: ಬ್ಯಾಂಕ್‌ ಖಾಸಗೀಕರಣದ ವಿರುದ್ಧ ಬ್ಯಾಂಕ್‌ ಯೂನಿಯನ್‌ ಮುಷ್ಕರ
* ಡಿಸೆಂಬರ್‌ 17: ಬ್ಯಾಂಕ್‌ ಖಾಸಗೀಕರಣದ ವಿರುದ್ಧ ಬ್ಯಾಂಕ್‌ ಯೂನಿಯನ್‌ ಮುಷ್ಕರ
* ಡಿಸೆಂಬರ್‌ 18: ಯು ಸೊಸೊ ಥಾಮ್‌ ಪುಣ್ಯ ಸ್ಮರಣೆ/ಗುರುಘಿಸಿದಾಸ್‌ ಜಯಂತಿ
* ಡಿಸೆಂಬರ್‌ 19: ಭಾನುವಾರ

ಸಾರ್ವಜನಿಕ ವಲಯದ 2 ಬ್ಯಾಂಕುಗಳ ಖಾಸಗೀಕರಣಕ್ಕೆ ಸಂಬಂಧಿಸಿ ಸರ್ಕಾರ ಸಂಸತ್ತಿನ  ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಇಚ್ಛಿಸಿರೋ ಮಸೂದೆಯನ್ನು ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯುನಿಯನ್ಸ್  ಡಿಸೆಂಬರ್ 16 ಹಾಗೂ 17ರಂದು ಎರಡು ದಿನಗಳ ದೇಶವ್ಯಾಪ್ತಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಇದಕ್ಕೆ ಸಂಬಂಧಿಸಿ ಭಾರತೀಯ ಬ್ಯಾಂಕ್ ಗಳ ಸಂಘಟನೆಗೆ ಯುನೈಟೆಡ್ ಫೋರಂ ನೋಟಿಸ್ ಕೂಡ  ನೀಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಗುರುವಾರ ಹಾಗೂ ಶುಕ್ರವಾರ ಬ್ಯಾಂಕುಗಳು ಮುಚ್ಚಿರಲಿವೆ. ಈ ವರ್ಷ ಫೆಬ್ರವರಿಯಲ್ಲಿ 2021-22ನೇ ಸಾಲಿನ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಸಾರ್ವಜನಿಕ ವಲಯದ ಎರಡು ಬ್ಯಾಂಕ್ ಗಳ ಖಾಸಗೀಕರಣದ ಬಗ್ಗೆ ಪ್ರಸ್ತಾಪಿಸಿದ್ದರು.1.75ಲಕ್ಷ ಕೋಟಿ ರೂಪಾಯಿ ಆದಾಯ ಗಳಿಸೋ ಉದ್ದೇಶದಿಂದ ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣವನ್ನು ಘೋಷಿಸಿದ್ದರು. ಸರ್ಕಾರದ ಈ ಖಾಸಗೀಕರಣ ನೀತಿಯನ್ನು ವಿರೋಧಿಸಿ ಚಳವಳಿ ನಡೆಸಲು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯುನಿಯನ್ಸ್  ನಿರ್ಧರಿಸಿದೆ.

 

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

13 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

14 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

15 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

15 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

16 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

16 hours ago