Featured

ಗಮನಿಸಿ : ಮುಂದಿನ ವಾರ  ನಾಲ್ಕು ದಿನ ಬ್ಯಾಂಕ್ ಕಾರ್ಯನಿರ್ವಹಿಸೋದಿಲ್ಲ – Vishwanews24

ಗಮನಿಸಿ : ಮುಂದಿನ ವಾರ  ನಾಲ್ಕು ದಿನ ಬ್ಯಾಂಕ್ ಕಾರ್ಯನಿರ್ವಹಿಸೋದಿಲ್ಲ – Vishwanews24

ಬೆಂಗಳೂರು:  ಮುಂದಿನ ವಾರ ಸತತ ನಾಲ್ಕು ದಿನ ಬ್ಯಾಂಕ್  ಕಾರ್ಯನಿರ್ವಹಿಸೋದಿಲ್ಲ. ಡಿಸೆಂಬರ್ 16, 17, 18 ಹಾಗೂ 19ರಂದು ಬ್ಯಾಂಕುಗಳಿಗೆ ರಜೆಯಿದೆ. ಹೀಗಾಗಿ ಈ ದಿನಗಳಂದು ಯಾವುದೇ ಬ್ಯಾಂಕ್ ಕೆಲಸಗಳನ್ನಿಟ್ಟುಕೊಳ್ಳಬೇಡಿ. ಆದ್ರೆ ಈ ದಿನಗಳಲ್ಲಿ ಎಲ್ಲ ಬ್ಯಾಂಕಿಂಗ್ ಆನ್ಲೈನ್ ವಹಿವಾಟುಗಳು ಎಂದಿನಂತೆ ನಡೆಯಲಿವೆ.

ಮುಂದಿನ ವಾರ ಬ್ಯಾಂಕ್‌ ರಜೆಗಳ ಪಟ್ಟಿ

* ಡಿಸೆಂಬರ್‌ 16: ಬ್ಯಾಂಕ್‌ ಖಾಸಗೀಕರಣದ ವಿರುದ್ಧ ಬ್ಯಾಂಕ್‌ ಯೂನಿಯನ್‌ ಮುಷ್ಕರ
* ಡಿಸೆಂಬರ್‌ 17: ಬ್ಯಾಂಕ್‌ ಖಾಸಗೀಕರಣದ ವಿರುದ್ಧ ಬ್ಯಾಂಕ್‌ ಯೂನಿಯನ್‌ ಮುಷ್ಕರ
* ಡಿಸೆಂಬರ್‌ 18: ಯು ಸೊಸೊ ಥಾಮ್‌ ಪುಣ್ಯ ಸ್ಮರಣೆ/ಗುರುಘಿಸಿದಾಸ್‌ ಜಯಂತಿ
* ಡಿಸೆಂಬರ್‌ 19: ಭಾನುವಾರ

ಸಾರ್ವಜನಿಕ ವಲಯದ 2 ಬ್ಯಾಂಕುಗಳ ಖಾಸಗೀಕರಣಕ್ಕೆ ಸಂಬಂಧಿಸಿ ಸರ್ಕಾರ ಸಂಸತ್ತಿನ  ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಇಚ್ಛಿಸಿರೋ ಮಸೂದೆಯನ್ನು ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯುನಿಯನ್ಸ್  ಡಿಸೆಂಬರ್ 16 ಹಾಗೂ 17ರಂದು ಎರಡು ದಿನಗಳ ದೇಶವ್ಯಾಪ್ತಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಇದಕ್ಕೆ ಸಂಬಂಧಿಸಿ ಭಾರತೀಯ ಬ್ಯಾಂಕ್ ಗಳ ಸಂಘಟನೆಗೆ ಯುನೈಟೆಡ್ ಫೋರಂ ನೋಟಿಸ್ ಕೂಡ  ನೀಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಗುರುವಾರ ಹಾಗೂ ಶುಕ್ರವಾರ ಬ್ಯಾಂಕುಗಳು ಮುಚ್ಚಿರಲಿವೆ. ಈ ವರ್ಷ ಫೆಬ್ರವರಿಯಲ್ಲಿ 2021-22ನೇ ಸಾಲಿನ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಸಾರ್ವಜನಿಕ ವಲಯದ ಎರಡು ಬ್ಯಾಂಕ್ ಗಳ ಖಾಸಗೀಕರಣದ ಬಗ್ಗೆ ಪ್ರಸ್ತಾಪಿಸಿದ್ದರು.1.75ಲಕ್ಷ ಕೋಟಿ ರೂಪಾಯಿ ಆದಾಯ ಗಳಿಸೋ ಉದ್ದೇಶದಿಂದ ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣವನ್ನು ಘೋಷಿಸಿದ್ದರು. ಸರ್ಕಾರದ ಈ ಖಾಸಗೀಕರಣ ನೀತಿಯನ್ನು ವಿರೋಧಿಸಿ ಚಳವಳಿ ನಡೆಸಲು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯುನಿಯನ್ಸ್  ನಿರ್ಧರಿಸಿದೆ.

 

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

21 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

22 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

22 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

22 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

23 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

3 days ago