Featured

ಗಮನಿಸಿ : ಮುಂದಿನ ವಾರ  ನಾಲ್ಕು ದಿನ ಬ್ಯಾಂಕ್ ಕಾರ್ಯನಿರ್ವಹಿಸೋದಿಲ್ಲ – Vishwanews24

ಗಮನಿಸಿ : ಮುಂದಿನ ವಾರ  ನಾಲ್ಕು ದಿನ ಬ್ಯಾಂಕ್ ಕಾರ್ಯನಿರ್ವಹಿಸೋದಿಲ್ಲ – Vishwanews24

ಬೆಂಗಳೂರು:  ಮುಂದಿನ ವಾರ ಸತತ ನಾಲ್ಕು ದಿನ ಬ್ಯಾಂಕ್  ಕಾರ್ಯನಿರ್ವಹಿಸೋದಿಲ್ಲ. ಡಿಸೆಂಬರ್ 16, 17, 18 ಹಾಗೂ 19ರಂದು ಬ್ಯಾಂಕುಗಳಿಗೆ ರಜೆಯಿದೆ. ಹೀಗಾಗಿ ಈ ದಿನಗಳಂದು ಯಾವುದೇ ಬ್ಯಾಂಕ್ ಕೆಲಸಗಳನ್ನಿಟ್ಟುಕೊಳ್ಳಬೇಡಿ. ಆದ್ರೆ ಈ ದಿನಗಳಲ್ಲಿ ಎಲ್ಲ ಬ್ಯಾಂಕಿಂಗ್ ಆನ್ಲೈನ್ ವಹಿವಾಟುಗಳು ಎಂದಿನಂತೆ ನಡೆಯಲಿವೆ.

ಮುಂದಿನ ವಾರ ಬ್ಯಾಂಕ್‌ ರಜೆಗಳ ಪಟ್ಟಿ

* ಡಿಸೆಂಬರ್‌ 16: ಬ್ಯಾಂಕ್‌ ಖಾಸಗೀಕರಣದ ವಿರುದ್ಧ ಬ್ಯಾಂಕ್‌ ಯೂನಿಯನ್‌ ಮುಷ್ಕರ
* ಡಿಸೆಂಬರ್‌ 17: ಬ್ಯಾಂಕ್‌ ಖಾಸಗೀಕರಣದ ವಿರುದ್ಧ ಬ್ಯಾಂಕ್‌ ಯೂನಿಯನ್‌ ಮುಷ್ಕರ
* ಡಿಸೆಂಬರ್‌ 18: ಯು ಸೊಸೊ ಥಾಮ್‌ ಪುಣ್ಯ ಸ್ಮರಣೆ/ಗುರುಘಿಸಿದಾಸ್‌ ಜಯಂತಿ
* ಡಿಸೆಂಬರ್‌ 19: ಭಾನುವಾರ

ಸಾರ್ವಜನಿಕ ವಲಯದ 2 ಬ್ಯಾಂಕುಗಳ ಖಾಸಗೀಕರಣಕ್ಕೆ ಸಂಬಂಧಿಸಿ ಸರ್ಕಾರ ಸಂಸತ್ತಿನ  ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಇಚ್ಛಿಸಿರೋ ಮಸೂದೆಯನ್ನು ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯುನಿಯನ್ಸ್  ಡಿಸೆಂಬರ್ 16 ಹಾಗೂ 17ರಂದು ಎರಡು ದಿನಗಳ ದೇಶವ್ಯಾಪ್ತಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಇದಕ್ಕೆ ಸಂಬಂಧಿಸಿ ಭಾರತೀಯ ಬ್ಯಾಂಕ್ ಗಳ ಸಂಘಟನೆಗೆ ಯುನೈಟೆಡ್ ಫೋರಂ ನೋಟಿಸ್ ಕೂಡ  ನೀಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಗುರುವಾರ ಹಾಗೂ ಶುಕ್ರವಾರ ಬ್ಯಾಂಕುಗಳು ಮುಚ್ಚಿರಲಿವೆ. ಈ ವರ್ಷ ಫೆಬ್ರವರಿಯಲ್ಲಿ 2021-22ನೇ ಸಾಲಿನ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಸಾರ್ವಜನಿಕ ವಲಯದ ಎರಡು ಬ್ಯಾಂಕ್ ಗಳ ಖಾಸಗೀಕರಣದ ಬಗ್ಗೆ ಪ್ರಸ್ತಾಪಿಸಿದ್ದರು.1.75ಲಕ್ಷ ಕೋಟಿ ರೂಪಾಯಿ ಆದಾಯ ಗಳಿಸೋ ಉದ್ದೇಶದಿಂದ ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣವನ್ನು ಘೋಷಿಸಿದ್ದರು. ಸರ್ಕಾರದ ಈ ಖಾಸಗೀಕರಣ ನೀತಿಯನ್ನು ವಿರೋಧಿಸಿ ಚಳವಳಿ ನಡೆಸಲು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯುನಿಯನ್ಸ್  ನಿರ್ಧರಿಸಿದೆ.

 

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

1 hour ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

1 hour ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

1 hour ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago