ಉಡುಪಿ, : ಕೇಂದ್ರ ಸರ್ಕಾರವು ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಆಚರಣೆ ಹಿನ್ನೆಲೆ, ರಾಷ್ಟ್ರೀಯ ಭದ್ರತಾ ಕಾಯ್ದೆಯ ಜೊತೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸಾರ್ವಜನಿಕರಿಗೆ ಉಚಿತ ಪಡಿತರ ವಿತರಿಸುವ ಯೋಜನೆ ಜಾರಿಗೊಳಿಸಿರುತ್ತದೆ.
ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಎನ್.ಎಫ್.ಎಸ್.ಎ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರ ಧಾನ್ಯವನ್ನು ಏಪ್ರಿಲ್ ನಿಂದ ಅಂತ್ಯೋದಯ (ಎ.ಎ.ವೈ) ಚೀಟಿದಾರರಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ ೩೫ ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆಜಿ. ಅಕ್ಕಿ, ಆದ್ಯತಾ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆ.ಜಿ ಅಕ್ಕಿ, ಒ.ಎಮ್.ಎಸ್.ಎಸ್ ಯೋಜನೆಯಡಿ ಪ್ರತಿ ಸದಸ್ಯರಿಗೆ ಹೆಚ್ಚುವರಿ ೧ ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆ.ಜಿ ಅಕ್ಕಿ ವಿತರಿಸಲಾಗುವುದು.
ಆದ್ಯತೇತರ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಪ್ರತಿ ಕೆ.ಜಿ ಗೆ ೧೫ ರೂ. ನಂತೆ ಏಕ ಸದಸ್ಯ ಪಡಿತರ ಚೀಟಿಗೆ ೫ ಕೆ.ಜಿ ಅಕ್ಕಿ ಹಾಗೂ ಒಂದಕ್ಕಿ0ತ ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ ೧೦ ಕೆ.ಜಿ ಅಕ್ಕಿ ವಿತರಿಸಲಾಗುವುದು.
ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲಾ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಬಹುದಾಗಿದ್ದು, ಬೇರೆ ರಾಜ್ಯದ ಪಡಿತರ ಚೀಟಿದಾರರು ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಕೆ.ಜಿ ಗೆ 3 ರ ರೂ. ಪಾವತಿಸಿ ಪಡಿತರ ಪಡೆಯಬಹುದಾಗಿದೆ.
ಪಡಿತರ ಚೀಟಿದಾರರು ಹಂಚಿಕೆ ಮಾಡಿದ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬoದಲ್ಲಿ ಅಂತಹ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದು. ಪಡಿತರ ವಿತರಣೆ ಕುರಿತು ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ: ೧೯೬೭, ತಹಶೀಲ್ದಾರ್ ಕಚೇರಿ ಅಥವಾ ಉಪ ನಿರ್ದೇಶಕರ ಕಚೇರಿಗ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…