Featured

ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಉಡುಪಿ, : ಕೇಂದ್ರ ಸರ್ಕಾರವು ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಆಚರಣೆ ಹಿನ್ನೆಲೆ, ರಾಷ್ಟ್ರೀಯ ಭದ್ರತಾ ಕಾಯ್ದೆಯ ಜೊತೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸಾರ್ವಜನಿಕರಿಗೆ ಉಚಿತ ಪಡಿತರ ವಿತರಿಸುವ ಯೋಜನೆ ಜಾರಿಗೊಳಿಸಿರುತ್ತದೆ.

ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಎನ್.ಎಫ್.ಎಸ್.ಎ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರ ಧಾನ್ಯವನ್ನು ಏಪ್ರಿಲ್ ನಿಂದ ಅಂತ್ಯೋದಯ (ಎ.ಎ.ವೈ) ಚೀಟಿದಾರರಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ ೩೫ ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆಜಿ. ಅಕ್ಕಿ, ಆದ್ಯತಾ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆ.ಜಿ ಅಕ್ಕಿ, ಒ.ಎಮ್.ಎಸ್.ಎಸ್ ಯೋಜನೆಯಡಿ ಪ್ರತಿ ಸದಸ್ಯರಿಗೆ ಹೆಚ್ಚುವರಿ ೧ ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆ.ಜಿ ಅಕ್ಕಿ ವಿತರಿಸಲಾಗುವುದು.

ಆದ್ಯತೇತರ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಪ್ರತಿ ಕೆ.ಜಿ ಗೆ ೧೫ ರೂ. ನಂತೆ ಏಕ ಸದಸ್ಯ ಪಡಿತರ ಚೀಟಿಗೆ ೫ ಕೆ.ಜಿ ಅಕ್ಕಿ ಹಾಗೂ ಒಂದಕ್ಕಿ0ತ ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ ೧೦ ಕೆ.ಜಿ ಅಕ್ಕಿ ವಿತರಿಸಲಾಗುವುದು.

ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲಾ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಬಹುದಾಗಿದ್ದು, ಬೇರೆ ರಾಜ್ಯದ ಪಡಿತರ ಚೀಟಿದಾರರು ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಕೆ.ಜಿ ಗೆ 3 ರ ರೂ. ಪಾವತಿಸಿ ಪಡಿತರ ಪಡೆಯಬಹುದಾಗಿದೆ.

ಪಡಿತರ ಚೀಟಿದಾರರು ಹಂಚಿಕೆ ಮಾಡಿದ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬoದಲ್ಲಿ ಅಂತಹ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದು. ಪಡಿತರ ವಿತರಣೆ ಕುರಿತು ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ: ೧೯೬೭, ತಹಶೀಲ್ದಾರ್ ಕಚೇರಿ ಅಥವಾ ಉಪ ನಿರ್ದೇಶಕರ ಕಚೇರಿಗ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

5 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

11 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

13 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

14 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

14 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

14 hours ago