ಉಡುಪಿ, : ಕೇಂದ್ರ ಸರ್ಕಾರವು ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಆಚರಣೆ ಹಿನ್ನೆಲೆ, ರಾಷ್ಟ್ರೀಯ ಭದ್ರತಾ ಕಾಯ್ದೆಯ ಜೊತೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸಾರ್ವಜನಿಕರಿಗೆ ಉಚಿತ ಪಡಿತರ ವಿತರಿಸುವ ಯೋಜನೆ ಜಾರಿಗೊಳಿಸಿರುತ್ತದೆ.
ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಎನ್.ಎಫ್.ಎಸ್.ಎ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರ ಧಾನ್ಯವನ್ನು ಏಪ್ರಿಲ್ ನಿಂದ ಅಂತ್ಯೋದಯ (ಎ.ಎ.ವೈ) ಚೀಟಿದಾರರಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ ೩೫ ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆಜಿ. ಅಕ್ಕಿ, ಆದ್ಯತಾ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆ.ಜಿ ಅಕ್ಕಿ, ಒ.ಎಮ್.ಎಸ್.ಎಸ್ ಯೋಜನೆಯಡಿ ಪ್ರತಿ ಸದಸ್ಯರಿಗೆ ಹೆಚ್ಚುವರಿ ೧ ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆ.ಜಿ ಅಕ್ಕಿ ವಿತರಿಸಲಾಗುವುದು.
ಆದ್ಯತೇತರ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಪ್ರತಿ ಕೆ.ಜಿ ಗೆ ೧೫ ರೂ. ನಂತೆ ಏಕ ಸದಸ್ಯ ಪಡಿತರ ಚೀಟಿಗೆ ೫ ಕೆ.ಜಿ ಅಕ್ಕಿ ಹಾಗೂ ಒಂದಕ್ಕಿ0ತ ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ ೧೦ ಕೆ.ಜಿ ಅಕ್ಕಿ ವಿತರಿಸಲಾಗುವುದು.
ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲಾ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಬಹುದಾಗಿದ್ದು, ಬೇರೆ ರಾಜ್ಯದ ಪಡಿತರ ಚೀಟಿದಾರರು ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಕೆ.ಜಿ ಗೆ 3 ರ ರೂ. ಪಾವತಿಸಿ ಪಡಿತರ ಪಡೆಯಬಹುದಾಗಿದೆ.
ಪಡಿತರ ಚೀಟಿದಾರರು ಹಂಚಿಕೆ ಮಾಡಿದ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬoದಲ್ಲಿ ಅಂತಹ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದು. ಪಡಿತರ ವಿತರಣೆ ಕುರಿತು ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ: ೧೯೬೭, ತಹಶೀಲ್ದಾರ್ ಕಚೇರಿ ಅಥವಾ ಉಪ ನಿರ್ದೇಶಕರ ಕಚೇರಿಗ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…