Featured

ಗರ್ಭಕಂಠದ ಕ್ಯಾನ್ಸರ್​​​​ನಿಂದ 26ನೇ ವಯಸ್ಸಿನಲ್ಲಿ ನಿಧನರಾದ ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್ – Vishwanews24

ಗರ್ಭಕಂಠದ ಕ್ಯಾನ್ಸರ್​​​​ನಿಂದ 26ನೇ ವಯಸ್ಸಿನಲ್ಲಿ ನಿಧನರಾದ ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್

ನ್ಯೂಯಾರ್ಕ್: ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್ ನಿಧನರಾಗಿದ್ದಾರೆ. ಶೆರಿಕಾ 2015 ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಉರುಗ್ವೆಯನ್ನು ಪ್ರತಿನಿಧಿಸಿದ್ದರು. ನ್ಯೂಯಾರ್ಕ್ ಪೋಸ್ಟ್‌ನಲ್ಲಿನ ವರದಿಯ ಪ್ರಕಾರ, ಶೆರಿಕಾ ಡಿ ಅರ್ಮಾಸ್ ಗರ್ಭಕಂಠದ ಕ್ಯಾನ್ಸರ್​​​​​ನಿಂದಾಗಿ ಅಕ್ಟೋಬರ್ 13 ರಂದು 26 ನೇ ವಯಸ್ಸಿನಲ್ಲಿ ನಿಧನರಾದರು. ಡಿ ಅರ್ಮಾಸ್ ಅವರು ಕೀಮೋಥೆರಪಿ ಮತ್ತು ರೇಡಿಯೊಥೆರಪಿ ಚಿಕಿತ್ಸೆಗೆ ಒಳಗಾಗಿದ್ದರು. ಶೆರಿಕಾ ಸಾವಿನ ಸುದ್ದಿಯಿಂದ ಅಭಿಮಾನಿಗಳು ಶಾಕ್ ಆಗಿದ್ದು, ಅವರ ನಿಧನಕ್ಕೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಶೆರಿಕಾ ಸಾವಿಗೆ ಉರುಗ್ವೆ ಮಾತ್ರವಲ್ಲದೆ, ಪ್ರಪಂಚದಾದ್ಯಂತ ಶೋಕಾಚರಣೆ ನಡೆಸಿದ್ದು, ಆಕೆಯ ಸಹೋದರ ಮಾಯಕ್ ಡಿ ಅರ್ಮಾಸ್, 2021 ರ ಮಿಸ್ ಉರುಗ್ವೆ ಲೋಲಾ ಡಿ ಲಾಸ್ ಸ್ಯಾಂಟೋಸ್ ಸೇರಿದಂತೆ ಹಲವರು ಸಾಮಾಜಿಕ ಮಾಧ್ಯಮದಲ್ಲಿ ಶೆರಿಕಾ ಕುರಿತು ಬರೆದಿದ್ದು, ಮಿಸ್ ಯೂನಿವರ್ಸ್ ಉರುಗ್ವೆ 2022 ಕಾರ್ಲಾ ರೊಮೆರೊ ಅವರು ಮಿಸ್ ಡಿ ಅರ್ಮಾಸ್ ನಾನು ಭೇಟಿಯಾದ ಅತ್ಯಂತ ಸುಂದರ ಮಹಿಳೆಯರಲ್ಲಿ ಒಬ್ಬರು ಎಂದು ಪೋಸ್ಟ್ ಮಾಡಿದ್ದಾರೆ.

ಹಿಂದಿನ ಸ್ಪ್ಯಾನಿಷ್ ಸಂದರ್ಶನದಲ್ಲಿ, ಶೆರಿಕಾ ತಾನು ಯಾವಾಗಲೂ ಮಾಡೆಲ್ ಆಗಲು ಬಯಸುತ್ತೇನೆ ಎಂದು ಬಹಿರಂಗಪಡಿಸಿದ್ದರು.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

15 minutes ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

48 minutes ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

59 minutes ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

1 hour ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

1 hour ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

1 hour ago