Featured

ಗರ್ಭಕೋಶದ ಕ್ಯಾನ್ಸರ್ : ನಟಿ ಪೂನಂ ಪಾಂಡೆ ನಿಧನ – vishwanews24

ಗರ್ಭಕೋಶದ ಕ್ಯಾನ್ಸರ್ : ನಟಿ ಪೂನಂ ಪಾಂಡೆ ನಿಧನ

32 ವರ್ಷಕ್ಕೆ ಬದುಕು ಅಂತ್ಯ

ಮುಂಬೈ: ಮಾಡೆಲ್​ ಹಾಗೂ ನಟಿ ಪೂನಂ ಪಾಂಡೆ ಗರ್ಭಕೋಶದ ಕ್ಯಾನ್ಸರ್​ನಿಂದಾಗಿ ಫೆಬ್ರವರಿ 1ರಂದು ಮೃತಪಟ್ಟಿರುವುದಾಗಿ ಆಕೆಯ ತಂಡ ಶುಕ್ರವಾರ (ಫೆ.02) ಬೆಳಗ್ಗೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಗುರುವಾರ ರಾತ್ರಿ ಪೂನಂ ಪಾಂಡೆ ಸಾವಿಗೀಡಾಗಿದ್ದಾರೆ ಎಂದು ಅವರ ತಂಡ ಮಾಧ್ಯಮಗಳಿಗೆ ಖಚಿತಪಡಿಸಿದೆ. ಕೊನೆಯುಸಿರೆಳೆದಾಗ ಆಕೆ ಹುಟ್ಟೂರಾದ ಉತ್ತರ ಪ್ರದೇಶದ ಕಾನ್ಪುರದಲ್ಲಿದ್ದಳು. ಆಕೆಯ ಅಂತ್ಯಕ್ರಿಯೆಯ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ತಂಡ ಮಾಹಿತಿ ನೀಡಿದೆ.

ಈ ಮುಂಜಾನೆಯು ನಮಗೆ ಕಠಿಣವಾಗಿದೆ. ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಳೆದುಕೊಂಡಿದ್ದೇವೆ ಎಂದು ನಿಮಗೆ ತಿಳಿಸಲು ತುಂಬಾ ದುಃಖವಾಗಿದೆ. ಅವಳೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಂದು ಜೀವಂತ ರೂಪವೂ ಶುದ್ಧ ಪ್ರೀತಿ ಮತ್ತು ದಯೆಯಿಂದ ಭೇಟಿಯಾಯಿತು ಎಂದು ಪೂನಂ ಅವರ ಅಧಿಕೃತ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇನ್ನು ಪೂನಂ ಪಾಂಡೆಯ ಸಾವಿನ ಸುದ್ದಿಯನ್ನು ಅನೇಕರು ಗಂಭೀರವಾಗಿ ತೆಗೆದುಕೊಂಡಿಲ್ಲ. ಅದರಲ್ಲೂ ಅಭಿಮಾನಿಗಳು ಅಪನಂಬಿಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆಘಾತಕ್ಕೂ ಒಳಗಾಗಿದ್ದಾರೆ. ಕೆಲವರು ಬೇಸರವನ್ನು ವ್ಯಕ್ತಪಡಿಸಿದರೆ, ಕೆಲವರು ಇದು ಪ್ರಚಾರದ ಗಿಮಿಕ್ ಎಂದು ಹೇಳಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಅವರ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಮತ್ತೊಂದು ಪೋಸ್ಟ್ ಬಂದರೂ ಬರಬಹುದು ಎನ್ನುತ್ತಿದ್ದಾರೆ. ಆದರೆ, ಪೂನಂ ಸಾವಿನ ಸುದ್ದಿಯನ್ನು ಅವರ ಮ್ಯಾನೇಜರ್​ ಖಚಿತಪಡಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

9 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago