Featured

ಗರ್ಭಕೋಶದ ಕ್ಯಾನ್ಸರ್ : ನಟಿ ಪೂನಂ ಪಾಂಡೆ ನಿಧನ – vishwanews24

ಗರ್ಭಕೋಶದ ಕ್ಯಾನ್ಸರ್ : ನಟಿ ಪೂನಂ ಪಾಂಡೆ ನಿಧನ

32 ವರ್ಷಕ್ಕೆ ಬದುಕು ಅಂತ್ಯ

ಮುಂಬೈ: ಮಾಡೆಲ್​ ಹಾಗೂ ನಟಿ ಪೂನಂ ಪಾಂಡೆ ಗರ್ಭಕೋಶದ ಕ್ಯಾನ್ಸರ್​ನಿಂದಾಗಿ ಫೆಬ್ರವರಿ 1ರಂದು ಮೃತಪಟ್ಟಿರುವುದಾಗಿ ಆಕೆಯ ತಂಡ ಶುಕ್ರವಾರ (ಫೆ.02) ಬೆಳಗ್ಗೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಗುರುವಾರ ರಾತ್ರಿ ಪೂನಂ ಪಾಂಡೆ ಸಾವಿಗೀಡಾಗಿದ್ದಾರೆ ಎಂದು ಅವರ ತಂಡ ಮಾಧ್ಯಮಗಳಿಗೆ ಖಚಿತಪಡಿಸಿದೆ. ಕೊನೆಯುಸಿರೆಳೆದಾಗ ಆಕೆ ಹುಟ್ಟೂರಾದ ಉತ್ತರ ಪ್ರದೇಶದ ಕಾನ್ಪುರದಲ್ಲಿದ್ದಳು. ಆಕೆಯ ಅಂತ್ಯಕ್ರಿಯೆಯ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ತಂಡ ಮಾಹಿತಿ ನೀಡಿದೆ.

ಈ ಮುಂಜಾನೆಯು ನಮಗೆ ಕಠಿಣವಾಗಿದೆ. ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಳೆದುಕೊಂಡಿದ್ದೇವೆ ಎಂದು ನಿಮಗೆ ತಿಳಿಸಲು ತುಂಬಾ ದುಃಖವಾಗಿದೆ. ಅವಳೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಂದು ಜೀವಂತ ರೂಪವೂ ಶುದ್ಧ ಪ್ರೀತಿ ಮತ್ತು ದಯೆಯಿಂದ ಭೇಟಿಯಾಯಿತು ಎಂದು ಪೂನಂ ಅವರ ಅಧಿಕೃತ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇನ್ನು ಪೂನಂ ಪಾಂಡೆಯ ಸಾವಿನ ಸುದ್ದಿಯನ್ನು ಅನೇಕರು ಗಂಭೀರವಾಗಿ ತೆಗೆದುಕೊಂಡಿಲ್ಲ. ಅದರಲ್ಲೂ ಅಭಿಮಾನಿಗಳು ಅಪನಂಬಿಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆಘಾತಕ್ಕೂ ಒಳಗಾಗಿದ್ದಾರೆ. ಕೆಲವರು ಬೇಸರವನ್ನು ವ್ಯಕ್ತಪಡಿಸಿದರೆ, ಕೆಲವರು ಇದು ಪ್ರಚಾರದ ಗಿಮಿಕ್ ಎಂದು ಹೇಳಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಅವರ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಮತ್ತೊಂದು ಪೋಸ್ಟ್ ಬಂದರೂ ಬರಬಹುದು ಎನ್ನುತ್ತಿದ್ದಾರೆ. ಆದರೆ, ಪೂನಂ ಸಾವಿನ ಸುದ್ದಿಯನ್ನು ಅವರ ಮ್ಯಾನೇಜರ್​ ಖಚಿತಪಡಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

20 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

20 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

22 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

22 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

23 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

23 hours ago