Featured

ಗರ್ಭಿಣಿಯರಿಗೆ ಕೊರೊನಾ ಲಸಿಕೆ : ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ -Vishwanews24

ಗರ್ಭಿಣಿಯರಿಗೆ ಕೊರೊನಾ ಲಸಿಕೆ : ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ -Vishwanews24

ಹೊಸದಿಲ್ಲಿ: ದೇಶಾದ್ಯಂತ ಇನ್ನು ಮುಂದೆ ಗರ್ಭಿಣಿಯರಿಗೂ ಲಸಿಕೆ ನೀಡುವ ಕಾರ್ಯ ಆರಂಭವಾಗಲಿದೆ. ಈ ಕುರಿತು ಕೇಂದ್ರ ಸರಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, “ಗರ್ಭ ಧರಿಸುವಿಕೆಯು ಕೊರೊನಾ ರಿಸ್ಕ್ ಅನ್ನು ಹೆಚ್ಚಿಸುವುದಿಲ್ಲ’ ಎಂಬುದನ್ನು ಸ್ಪಷ್ಟಪಡಿಸಿದೆ.

ಬಹುತೇಕ ಗರ್ಭಿಣಿಯರಿಗೆ ಸೋಂಕಿಗೊಳಗಾದರೂ ರೋಗಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಆದರೆ ಅವರ ಆರೋಗ್ಯ ಬೇಗನೆ ಹದಗೆಡಬಹುದು. ಹೀಗಾಗಿ ತಮ್ಮನ್ನು ಹಾಗೂ ತಮ್ಮ ಹೊಟ್ಟೆಯಲ್ಲಿರುವ ಮಗುವನ್ನು ರಕ್ಷಿಸಿಕೊಳ್ಳಬೇಕೆಂದರೆ ಅವರು ಲಸಿಕೆ ಪಡೆಯುವುದು ಮುಖ್ಯ ಎಂದು ಸರಕಾರ ತಿಳಿಸಿದೆ.

ಮಾರ್ಗಸೂಚಿಯಲ್ಲೇನಿದೆ?: ಗರ್ಭಿಣಿಯರಿಗೆ ಸೋಂಕು ತಗಲಿದರೂ ಶೇ.90ರಷ್ಟು ಮಂದಿ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲದೇ ಗುಣಮುಖರಾಗಿದ್ದಾರೆ. ಆದರೆ ಗಂಭೀರ ರೋಗ ಲಕ್ಷಣ ಇರುವವರಿಗೆ ಅಪಾಯ ಹೆಚ್ಚಿರುವ ಕಾರಣ, ಅಂಥವರು ಆಸ್ಪತ್ರೆಗೆ ದಾಖಲಾಗಲೇಬೇಕು. ಅತ್ಯಧಿಕ ರಕ್ತದೊತ್ತಡ, ಮಧುಮೇಹ, ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ, ಅತಿಕಾಯ, 35 ವರ್ಷ ಮೇಲ್ಪಟ್ಟವರು ಹೆಚ್ಚಿನ ನಿಗಾ ವಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖೀಸಲಾಗಿದೆ. ಜತೆಗೆ ಕೊರೊನಾ ಸೋಂಕಿತ ತಾಯಿಗೆ ಜನಿಸಿದ ಶೇ.95ರಷ್ಟು ಮಕ್ಕಳು ಆರೋಗ್ಯವಂತರಾಗಿದ್ದಾರೆ. ಕೆಲವೇ ಕೆಲವು ಪ್ರಕರಣಗಳಲ್ಲಿ ಮಾತ್ರ ಅವಧಿ ಪೂರ್ವ ಹೆರಿಗೆ, ಮಗುವಿನ ತೂಕ ಇಳಿಕೆಯಂಥ ಘಟನೆಗಳು ನಡೆದಿವೆ ಎಂದೂ ತಿಳಿಸಲಾಗಿದೆ.

ಎಲ್ಲ ಗರ್ಭಿಣಿಯರೂ ಕೋವಿನ್‌ ಆ್ಯಪ್‌ ನಲ್ಲಿ ನೋಂದಣಿ ಮಾಡಿಕೊಂಡು ಅಥವಾ ಲಸಿಕಾ ಕೇಂದ್ರಕ್ಕೆ ನೇರವಾಗಿ ಭೇಟಿ ನೀಡಿ ಲಸಿಕೆ ಪಡೆಯಬಹುದು ಎಂದು ಸರಕಾರ ತಿಳಿಸಿದೆ. ಜತೆಗೆ, ಅವರಿಗೆ ಲಸಿಕೆ ನೀಡುವ ಮುನ್ನ ಆ ಕುರಿತು ಆಪ್ತ ಸಮಾಲೋಚನೆ, ಸೂಕ್ತ ಮಾರ್ಗದರ್ಶನ ನೀಡುವಂತೆ ಮುಂಚೂಣಿ ಕಾರ್ಯಕರ್ತರಿಗೆ ಸೂಚಿಸಲಾಗಿದೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

12 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

12 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

12 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

13 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

14 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

14 hours ago