Featured

ಗರ್ಭಿಣಿಯರಿಗೆ ಕೊರೊನಾ ಲಸಿಕೆ : ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ -Vishwanews24

ಗರ್ಭಿಣಿಯರಿಗೆ ಕೊರೊನಾ ಲಸಿಕೆ : ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ -Vishwanews24

ಹೊಸದಿಲ್ಲಿ: ದೇಶಾದ್ಯಂತ ಇನ್ನು ಮುಂದೆ ಗರ್ಭಿಣಿಯರಿಗೂ ಲಸಿಕೆ ನೀಡುವ ಕಾರ್ಯ ಆರಂಭವಾಗಲಿದೆ. ಈ ಕುರಿತು ಕೇಂದ್ರ ಸರಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, “ಗರ್ಭ ಧರಿಸುವಿಕೆಯು ಕೊರೊನಾ ರಿಸ್ಕ್ ಅನ್ನು ಹೆಚ್ಚಿಸುವುದಿಲ್ಲ’ ಎಂಬುದನ್ನು ಸ್ಪಷ್ಟಪಡಿಸಿದೆ.

ಬಹುತೇಕ ಗರ್ಭಿಣಿಯರಿಗೆ ಸೋಂಕಿಗೊಳಗಾದರೂ ರೋಗಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಆದರೆ ಅವರ ಆರೋಗ್ಯ ಬೇಗನೆ ಹದಗೆಡಬಹುದು. ಹೀಗಾಗಿ ತಮ್ಮನ್ನು ಹಾಗೂ ತಮ್ಮ ಹೊಟ್ಟೆಯಲ್ಲಿರುವ ಮಗುವನ್ನು ರಕ್ಷಿಸಿಕೊಳ್ಳಬೇಕೆಂದರೆ ಅವರು ಲಸಿಕೆ ಪಡೆಯುವುದು ಮುಖ್ಯ ಎಂದು ಸರಕಾರ ತಿಳಿಸಿದೆ.

ಮಾರ್ಗಸೂಚಿಯಲ್ಲೇನಿದೆ?: ಗರ್ಭಿಣಿಯರಿಗೆ ಸೋಂಕು ತಗಲಿದರೂ ಶೇ.90ರಷ್ಟು ಮಂದಿ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲದೇ ಗುಣಮುಖರಾಗಿದ್ದಾರೆ. ಆದರೆ ಗಂಭೀರ ರೋಗ ಲಕ್ಷಣ ಇರುವವರಿಗೆ ಅಪಾಯ ಹೆಚ್ಚಿರುವ ಕಾರಣ, ಅಂಥವರು ಆಸ್ಪತ್ರೆಗೆ ದಾಖಲಾಗಲೇಬೇಕು. ಅತ್ಯಧಿಕ ರಕ್ತದೊತ್ತಡ, ಮಧುಮೇಹ, ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ, ಅತಿಕಾಯ, 35 ವರ್ಷ ಮೇಲ್ಪಟ್ಟವರು ಹೆಚ್ಚಿನ ನಿಗಾ ವಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖೀಸಲಾಗಿದೆ. ಜತೆಗೆ ಕೊರೊನಾ ಸೋಂಕಿತ ತಾಯಿಗೆ ಜನಿಸಿದ ಶೇ.95ರಷ್ಟು ಮಕ್ಕಳು ಆರೋಗ್ಯವಂತರಾಗಿದ್ದಾರೆ. ಕೆಲವೇ ಕೆಲವು ಪ್ರಕರಣಗಳಲ್ಲಿ ಮಾತ್ರ ಅವಧಿ ಪೂರ್ವ ಹೆರಿಗೆ, ಮಗುವಿನ ತೂಕ ಇಳಿಕೆಯಂಥ ಘಟನೆಗಳು ನಡೆದಿವೆ ಎಂದೂ ತಿಳಿಸಲಾಗಿದೆ.

ಎಲ್ಲ ಗರ್ಭಿಣಿಯರೂ ಕೋವಿನ್‌ ಆ್ಯಪ್‌ ನಲ್ಲಿ ನೋಂದಣಿ ಮಾಡಿಕೊಂಡು ಅಥವಾ ಲಸಿಕಾ ಕೇಂದ್ರಕ್ಕೆ ನೇರವಾಗಿ ಭೇಟಿ ನೀಡಿ ಲಸಿಕೆ ಪಡೆಯಬಹುದು ಎಂದು ಸರಕಾರ ತಿಳಿಸಿದೆ. ಜತೆಗೆ, ಅವರಿಗೆ ಲಸಿಕೆ ನೀಡುವ ಮುನ್ನ ಆ ಕುರಿತು ಆಪ್ತ ಸಮಾಲೋಚನೆ, ಸೂಕ್ತ ಮಾರ್ಗದರ್ಶನ ನೀಡುವಂತೆ ಮುಂಚೂಣಿ ಕಾರ್ಯಕರ್ತರಿಗೆ ಸೂಚಿಸಲಾಗಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago