ತಿರುವನಂತಪುರಂ: ಅನಾನಾಸಿನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣದಲ್ಲಿ ಘಟನೆಯ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆನೆ ಹತ್ಯೆಯಾದ ಒಂದೂವರೆ ವರ್ಷಗಳ ಬಳಿಕ ಎರಡನೇ ಆರೋಪಿ ರಿಯಾಜುದ್ದೀನ್ (38) ಪೊಲೀಸರಿಗೆ ಬಂದು ಶರಣಾಗಿದ್ದಾನೆ.
ಕಾಡು ಹಂದಿಯನ್ನು ಕೊಲ್ಲಲು ರೂಪಿಸಿದ ಬಲೆಗೆ ಆನೆ ಸಿಲುಕಿ ಮೃತಪಟ್ಟಿದ್ದು, ಕೊನೆಗೂ ಘಟನೆಯ ಪಶ್ಚಾತಾಪದಿಂದ ಆರೋಪಿ ಕೇರಳದ ಮುನ್ಸಿಫ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಅ.16ರಂದು ಶರಣಾಗಿದ್ದಾನೆ. ಈತ 2020 ಜೂನ್ ತಿಂಗಳಿನಿಂದ ನಾಪತ್ತೆಯಾಗಿದ್ದ. ಸುಮಾರು ಒಂದೂವರೆ ವರ್ಷದ ಬಳಿಕ ಕೋರ್ಟ್ಗೆ ಶರಣಾಗಿದ್ದಾನೆ.
ಇನ್ನು ರಿಯಾಜುದ್ದೀನ್ ತಂದೆ ಅಬ್ದುಲ್ ಕರೀಮ್ ಪ್ರಕರಣದ ಮೊದಲ ಆರೋಪಿಯಾಗಿದ್ದು, ಈಗಲೇ ನಾಪತ್ತೆಯಾಗಿದ್ದಾರೆ. ಆರೋಪಿ ರಿಯಾಜುದ್ದೀನ್ನನ್ನು ಅರಣ್ಯ ಇಲಾಖೆ ತಮ್ಮ ಕಸ್ಟಡಿಗೆ ತೆಗೆದುಕೊಂಡಿದೆ.
ಗರ್ಭಿಣಿ ಆನೆಯು ಹಸಿವಿನಿಂದ ಸ್ಫೋಟಕ ತುಂಬಿದ ಅನಾನಾಸು ತಿನ್ನಲು ಯತ್ನಿಸಿದಾಗ, ಸ್ಫೋಟಕ ಬಾಯಲ್ಲೇ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ಆನೆ ಕೆಲ ದಿನಗಳವರೆಗೆ ನರಳಿ ಮೃತಪಟ್ಟಿತ್ತು. ಬಳಿಕ ಅದರ ಅಂತಿಮ ಸಂಸ್ಕಾರವನ್ನು ಅರಣ್ಯ ಇಲಾಖೆ ನೆರವೇರಿಸಿತ್ತು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…