Featured

ಗರ್ಭಿಣಿ ಆನೆ ಕೊಂದ ಪ್ರಕರಣ : ಒಂದೂವರೆ ವರ್ಷಗಳ ಬಳಿಕ ಪೊಲೀಸರಿಗೆ ಶರಣಾದ ಆರೋಪಿ – Vishwanews24

ಗರ್ಭಿಣಿ ಆನೆ ಕೊಂದ ಪ್ರಕರಣ : ಒಂದೂವರೆ ವರ್ಷಗಳ ಬಳಿಕ ಪೊಲೀಸರಿಗೆ ಶರಣಾದ ಆರೋಪಿ – Vishwanews24

ತಿರುವನಂತಪುರಂ: ಅನಾನಾಸಿನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣದಲ್ಲಿ ಘಟನೆಯ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆನೆ ಹತ್ಯೆಯಾದ ಒಂದೂವರೆ ವರ್ಷಗಳ ಬಳಿಕ ಎರಡನೇ ಆರೋಪಿ ರಿಯಾಜುದ್ದೀನ್​ (38) ಪೊಲೀಸರಿಗೆ ಬಂದು ಶರಣಾಗಿದ್ದಾನೆ.

ಕಾಡು ಹಂದಿಯನ್ನು ಕೊಲ್ಲಲು ರೂಪಿಸಿದ ಬಲೆಗೆ ಆನೆ ಸಿಲುಕಿ ಮೃತಪಟ್ಟಿದ್ದು, ಕೊನೆಗೂ ಘಟನೆಯ ಪಶ್ಚಾತಾಪದಿಂದ ಆರೋಪಿ ಕೇರಳದ ಮುನ್ಸಿಫ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ ಮುಂದೆ ಅ.16ರಂದು ಶರಣಾಗಿದ್ದಾನೆ. ಈತ 2020 ಜೂನ್​ ತಿಂಗಳಿನಿಂದ ನಾಪತ್ತೆಯಾಗಿದ್ದ. ಸುಮಾರು ಒಂದೂವರೆ ವರ್ಷದ ಬಳಿಕ ಕೋರ್ಟ್​ಗೆ ಶರಣಾಗಿದ್ದಾನೆ.

ಇನ್ನು ರಿಯಾಜುದ್ದೀನ್​ ತಂದೆ ಅಬ್ದುಲ್​ ಕರೀಮ್​ ಪ್ರಕರಣದ ಮೊದಲ ಆರೋಪಿಯಾಗಿದ್ದು, ಈಗಲೇ ನಾಪತ್ತೆಯಾಗಿದ್ದಾರೆ. ಆರೋಪಿ ರಿಯಾಜುದ್ದೀನ್​ನನ್ನು ಅರಣ್ಯ ಇಲಾಖೆ ತಮ್ಮ ಕಸ್ಟಡಿಗೆ ತೆಗೆದುಕೊಂಡಿದೆ.

ಗರ್ಭಿಣಿ ಆನೆಯು ಹಸಿವಿನಿಂದ ಸ್ಫೋಟಕ ತುಂಬಿದ ಅನಾನಾಸು​ ತಿನ್ನಲು ಯತ್ನಿಸಿದಾಗ, ಸ್ಫೋಟಕ ಬಾಯಲ್ಲೇ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ಆನೆ ಕೆಲ ದಿನಗಳವರೆಗೆ ನರಳಿ ಮೃತಪಟ್ಟಿತ್ತು. ಬಳಿಕ ಅದರ ಅಂತಿಮ ಸಂಸ್ಕಾರವನ್ನು ಅರಣ್ಯ ಇಲಾಖೆ ನೆರವೇರಿಸಿತ್ತು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

15 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

17 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

18 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

18 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

18 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

18 hours ago