ತಿರುವನಂತಪುರಂ: ಅನಾನಾಸಿನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣದಲ್ಲಿ ಘಟನೆಯ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆನೆ ಹತ್ಯೆಯಾದ ಒಂದೂವರೆ ವರ್ಷಗಳ ಬಳಿಕ ಎರಡನೇ ಆರೋಪಿ ರಿಯಾಜುದ್ದೀನ್ (38) ಪೊಲೀಸರಿಗೆ ಬಂದು ಶರಣಾಗಿದ್ದಾನೆ.
ಕಾಡು ಹಂದಿಯನ್ನು ಕೊಲ್ಲಲು ರೂಪಿಸಿದ ಬಲೆಗೆ ಆನೆ ಸಿಲುಕಿ ಮೃತಪಟ್ಟಿದ್ದು, ಕೊನೆಗೂ ಘಟನೆಯ ಪಶ್ಚಾತಾಪದಿಂದ ಆರೋಪಿ ಕೇರಳದ ಮುನ್ಸಿಫ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಅ.16ರಂದು ಶರಣಾಗಿದ್ದಾನೆ. ಈತ 2020 ಜೂನ್ ತಿಂಗಳಿನಿಂದ ನಾಪತ್ತೆಯಾಗಿದ್ದ. ಸುಮಾರು ಒಂದೂವರೆ ವರ್ಷದ ಬಳಿಕ ಕೋರ್ಟ್ಗೆ ಶರಣಾಗಿದ್ದಾನೆ.
ಇನ್ನು ರಿಯಾಜುದ್ದೀನ್ ತಂದೆ ಅಬ್ದುಲ್ ಕರೀಮ್ ಪ್ರಕರಣದ ಮೊದಲ ಆರೋಪಿಯಾಗಿದ್ದು, ಈಗಲೇ ನಾಪತ್ತೆಯಾಗಿದ್ದಾರೆ. ಆರೋಪಿ ರಿಯಾಜುದ್ದೀನ್ನನ್ನು ಅರಣ್ಯ ಇಲಾಖೆ ತಮ್ಮ ಕಸ್ಟಡಿಗೆ ತೆಗೆದುಕೊಂಡಿದೆ.
ಗರ್ಭಿಣಿ ಆನೆಯು ಹಸಿವಿನಿಂದ ಸ್ಫೋಟಕ ತುಂಬಿದ ಅನಾನಾಸು ತಿನ್ನಲು ಯತ್ನಿಸಿದಾಗ, ಸ್ಫೋಟಕ ಬಾಯಲ್ಲೇ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ಆನೆ ಕೆಲ ದಿನಗಳವರೆಗೆ ನರಳಿ ಮೃತಪಟ್ಟಿತ್ತು. ಬಳಿಕ ಅದರ ಅಂತಿಮ ಸಂಸ್ಕಾರವನ್ನು ಅರಣ್ಯ ಇಲಾಖೆ ನೆರವೇರಿಸಿತ್ತು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…