ಲಕ್ನೋ: ಗಲಭೆಕೋರರಿಗೆ ದಂಡವೇ ಉತ್ತಮ ಮದ್ದು ಎಂದು ವಕ್ಫ್ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಂಡನೆ ವ್ಯಕ್ತಪಡಿಸಿದ್ದಾರೆ.
ಹರ್ದೋಯ್ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 2017 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಉತ್ತರ ಪ್ರದೇಶವು ಪ್ರತಿ 2-3 ದಿನಗಳಿಗೊಮ್ಮೆ ಗಲಭೆಗಳನ್ನು ಎದುರಿಸುತ್ತಿತ್ತು. ಗಲಭೆಕೋರರಿಗೆ ದಂಡ ಮಾತ್ರ ಚಿಕಿತ್ಸೆ. ನೀವು ನೋಡಬಹುದು, ಬಂಗಾಳ ಉರಿಯುತ್ತಿದೆ. ಮುಖ್ಯಮಂತ್ರಿ ಮೌನವಾಗಿದ್ದಾರೆ. ಅವರು ಗಲಭೆಕೋರರನ್ನು ‘ಶಾಂತಿ ರಾಯಭಾರಿಗಳು’ ಎಂದು ಕರೆಯುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ನಡೆಗೆ ಯೋಗಿ ಅಸಮಾಧಾನ ಹೊರಹಾಕಿದ್ದಾರೆ.
ಹೊಡೆತದ ಭಾಷೆ ಮಾತ್ರ ಅರಿತುಕೊಳ್ಳುವವರಿಗೆ, ಮಾತಿನ ಪದಗಳು ಅರ್ಥವಾಗುವುದಿಲ್ಲ. ಜಾತ್ಯತೀತತೆಯ ಹೆಸರಿನಲ್ಲಿ ಅವರು ಗಲಭೆಕೋರರಿಗೆ ಸ್ವಾತಂತ್ರ್ಯ ನೀಡಿದ್ದಾರೆ. ಸರ್ಕಾರ ಮೌನವಾಗಿದೆ. ಇಂತಹ ಅರಾಜಕತೆಯನ್ನು ನಿಯಂತ್ರಿಸಬೇಕು ಎಂದು ತಿಳಿಸಿದ್ದಾರೆ.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆದ ನಂತರ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅನೇಕ ಕುಟುಂಬಗಳ ಮನೆಗಳು ನಾಶವಾಗಿವೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಅವರು ನಿಯಮಿತವಾಗಿ ಗಸ್ತು ತಿರುಗುತ್ತಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…