ದುಬೈ: ಕತಾರ್ನಲ್ಲಿರುವ ಅಮೆರಿಕ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೆ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 23 ರಂದು ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಗಲ್ಫ್ ರಾಷ್ಟ್ರಗಳಾದ ಕತಾರ್, ಬಹ್ರೇನ್ ಮತ್ತು ಕುವೈತ್ ತಮ್ಮ ವಾಯುಪ್ರದೇಶವನ್ನು ಪುನಃ ತೆರೆದಿವೆ.
ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ವಾಯುಪ್ರದೇಶವನ್ನು ಪುನಃ ತೆರೆದಿದ್ದು, ದುಬೈ ವಿಮಾನ ನಿಲ್ದಾಣಗಳಲ್ಲಿ ವಿಮಾನ ಕಾರ್ಯಾಚರಣೆಗಳು ಪೂರ್ಣ ಸಾಮರ್ಥ್ಯದಲ್ಲಿ ಪುನರಾರಂಭಗೊಂಡಿವೆ ಎಂದು ದುಬೈ ವಿಮಾನ ನಿಲ್ದಾಣಗಳು ದೃಢಪಡಿಸಿವೆ. ಇತ್ತೀಚೆಗೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದ್ದ ಅಮೆರಿಕದ ವಿರುದ್ಧ ಇರಾನ್ ಪ್ರತಿದಾಳಿ ನಡೆಸಿತ್ತು. ಹೀಗಾಗಿ ಹೆಚ್ಚಿದ ಉದ್ವಿಗ್ನತೆಯ ಮಧ್ಯೆ ವಿಮಾನ ಕಾರ್ಯಾಚರಣೆಗಳನ್ನು ನಿಲ್ಲಿಸಲಾಗಿತ್ತು.
“ದುಬೈ ವಿಮಾನ ನಿಲ್ದಾಣಗಳು ಅನುಮೋದಿತ ವೇಳಾಪಟ್ಟಿಗಳನ್ನು ನಿರ್ವಹಿಸಲು ವಿಮಾನಯಾನ ಸಂಸ್ಥೆಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಕೆಲವು ವಿಳಂಬಗಳು ಅಥವಾ ರದ್ದತಿಗಳು ಇನ್ನೂ ಸಂಭವಿಸಬಹುದು. ಇತ್ತೀಚಿನ ನವೀಕರಣಗಳಿಗಾಗಿ ಪ್ರಯಾಣಿಕರು ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸಲು ಸೂಚಿಸಲಾಗಿದೆ” ಎಂದು ದುಬೈ ಮಾಧ್ಯಮ ಕಚೇರಿ ಹೇಳಿದೆ.
“ಈ ಸಮಯದಲ್ಲಿ ನಮ್ಮ ಪ್ರಯಾಣಿಕರು ಮನೆಗೆ ಮರಳಲು, ಅವರ ಮುಂದಿನ ಪ್ರಯಾಣವನ್ನು ಸುರಕ್ಷಿತವಾಗಿ ಮತ್ತು ಸರಾಗವಾಗಿ ತಲುಪಲು ಸಹಾಯ ಮಾಡುವುದು ನಮ್ಮ ಗುರಿಯಾಗಿದೆ. ಕಾರ್ಯಾಚರಣೆಗಳು ಪುನರಾರಂಭಗೊಳ್ಳುತ್ತಿದ್ದಂತೆ, ನಮ್ಮ ವಿಮಾನದ ವೇಳಾಪಟ್ಟಿಯಲ್ಲಿ ವಿಳಂಬವಾಗಬಹುದು. ಹೆಚ್ಚಿನ ಮಾಹಿತಿಗೆ ಪ್ರಯಾಣಿಕರು ವೆಬ್ ಸೈಟ್ ಪರಿಶೀಲಿಸಬಹುದು” ಎಂದು ಖತರ್ ಏರ್ ವೇಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…