ದುಬೈ: ಕತಾರ್ನಲ್ಲಿರುವ ಅಮೆರಿಕ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೆ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 23 ರಂದು ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಗಲ್ಫ್ ರಾಷ್ಟ್ರಗಳಾದ ಕತಾರ್, ಬಹ್ರೇನ್ ಮತ್ತು ಕುವೈತ್ ತಮ್ಮ ವಾಯುಪ್ರದೇಶವನ್ನು ಪುನಃ ತೆರೆದಿವೆ.
ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ವಾಯುಪ್ರದೇಶವನ್ನು ಪುನಃ ತೆರೆದಿದ್ದು, ದುಬೈ ವಿಮಾನ ನಿಲ್ದಾಣಗಳಲ್ಲಿ ವಿಮಾನ ಕಾರ್ಯಾಚರಣೆಗಳು ಪೂರ್ಣ ಸಾಮರ್ಥ್ಯದಲ್ಲಿ ಪುನರಾರಂಭಗೊಂಡಿವೆ ಎಂದು ದುಬೈ ವಿಮಾನ ನಿಲ್ದಾಣಗಳು ದೃಢಪಡಿಸಿವೆ. ಇತ್ತೀಚೆಗೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದ್ದ ಅಮೆರಿಕದ ವಿರುದ್ಧ ಇರಾನ್ ಪ್ರತಿದಾಳಿ ನಡೆಸಿತ್ತು. ಹೀಗಾಗಿ ಹೆಚ್ಚಿದ ಉದ್ವಿಗ್ನತೆಯ ಮಧ್ಯೆ ವಿಮಾನ ಕಾರ್ಯಾಚರಣೆಗಳನ್ನು ನಿಲ್ಲಿಸಲಾಗಿತ್ತು.
“ದುಬೈ ವಿಮಾನ ನಿಲ್ದಾಣಗಳು ಅನುಮೋದಿತ ವೇಳಾಪಟ್ಟಿಗಳನ್ನು ನಿರ್ವಹಿಸಲು ವಿಮಾನಯಾನ ಸಂಸ್ಥೆಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಕೆಲವು ವಿಳಂಬಗಳು ಅಥವಾ ರದ್ದತಿಗಳು ಇನ್ನೂ ಸಂಭವಿಸಬಹುದು. ಇತ್ತೀಚಿನ ನವೀಕರಣಗಳಿಗಾಗಿ ಪ್ರಯಾಣಿಕರು ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸಲು ಸೂಚಿಸಲಾಗಿದೆ” ಎಂದು ದುಬೈ ಮಾಧ್ಯಮ ಕಚೇರಿ ಹೇಳಿದೆ.
“ಈ ಸಮಯದಲ್ಲಿ ನಮ್ಮ ಪ್ರಯಾಣಿಕರು ಮನೆಗೆ ಮರಳಲು, ಅವರ ಮುಂದಿನ ಪ್ರಯಾಣವನ್ನು ಸುರಕ್ಷಿತವಾಗಿ ಮತ್ತು ಸರಾಗವಾಗಿ ತಲುಪಲು ಸಹಾಯ ಮಾಡುವುದು ನಮ್ಮ ಗುರಿಯಾಗಿದೆ. ಕಾರ್ಯಾಚರಣೆಗಳು ಪುನರಾರಂಭಗೊಳ್ಳುತ್ತಿದ್ದಂತೆ, ನಮ್ಮ ವಿಮಾನದ ವೇಳಾಪಟ್ಟಿಯಲ್ಲಿ ವಿಳಂಬವಾಗಬಹುದು. ಹೆಚ್ಚಿನ ಮಾಹಿತಿಗೆ ಪ್ರಯಾಣಿಕರು ವೆಬ್ ಸೈಟ್ ಪರಿಶೀಲಿಸಬಹುದು” ಎಂದು ಖತರ್ ಏರ್ ವೇಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ರನ್ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್ನ ಸರ್ದಾರ್ ವಲ್ಲಭಭಾಯಿ ಪಟೇಲ್…
ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …