ಮಂಗಳೂರು: ನಗರದ ಮೋರ್ಗನ್ ಗೇಟ್ ಬಳಿಯ ಮೈದಾನದಲ್ಲಿ ಶನಿವಾರ ಗಾಂಜಾ ಸೇವಿಸುತ್ತಲೇ ಸಾರ್ವಜನಿಕರಿಗೆ ಅದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂಟು ವಿದ್ಯಾರ್ಥಿಗಳನ್ನು ನಗರ ಅಪರಾಧ ಘಟಕ (ಸಿಸಿಬಿ) ಹಾಗೂ ಆರ್ಥಿಕ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣ (ಇ ಅಂಡ್ ಎನ್) ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಏಳು ಮಂದಿ ಕೇರಳದ ವಿದ್ಯಾರ್ಥಿಗಳು.
‘ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕೆರೆ ಕರಿಪ್ರ ನಿವಾಸಿ ಅಕ್ಷಯ್ ಕೆ.ಪ್ರಸಾದ್ (22), ಮಂಗಳೂರಿನ ಕಣ್ಣೂರು ಬೋರುಗುಡ್ಡೆ ನಿವಾಸಿ ಜಾಫರ್ (22), ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬ ಸಮೀಪದ ಶ್ರೀಕಂಠಪುರಂ ಗ್ರಾಮದ ಕೋಟ್ಟೂರು ತರಯಿಲ್ ನಿವಾಸಿ ನಿಮಿಲ್ (21), ಕಣ್ಣೂರು ಜಿಲ್ಲೆಯ ಎಡಕ್ಕಾಡ್ ಗ್ರಾಮದ ಮಾವಿಲಾಯ್ ನಿವಾಸಿ ಅಮಿತ್ ಶ್ರೀವತ್ಸನ್ (21), ಕಣ್ಣೂರು ಜಿಲ್ಲೆಯ ಕಪ್ಪಾಡ್ ಗ್ರಾಮದ ಚೆಲೂರಾ ನಿವಾಸಿ ಅಶ್ವಿನ್ (21), ಕೋಯಿಕ್ಕೋಡ್ ಜಿಲ್ಲೆಯ ಪುದಿಯಂಘಾಡಿ ಸಮೀಪದ ಮರಕ್ಕಾರಗಂಪರಂಬ್ ನಿವಾಸಿ ಮೊಹಮ್ಮದ್ ಅಮೀರ್, ಪತ್ತನಂತಿಟ್ಟ ಜಿಲ್ಲೆಯ ಅರನ್ಮುಲ ಗ್ರಾಮದ ನಾಲ್ಕಲಿಕ್ಕಲ್ ನಿವಾಸಿ ಆಕಾಶ್ ಎಸ್.ನಾಯರ್ ಮತ್ತು ಕಣ್ಣೂರು ಜಿಲ್ಲೆಯ ಪಯ್ಯಂಬಲ ನಿವಾಸಿ ಅಕ್ಷಯ್ ಎಂಬುವವರನ್ನು ಬಂಧಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ತಿಳಿಸಿದ್ದಾರೆ.
ಆರೋಪಿಗಳಿಂದ ₹ 12,000 ಮೌಲ್ಯದ 500 ಗ್ರಾಂ. ಗಾಂಜಾ, 8 ಮೊಬೈಲ್ ಫೋನ್, ₹ 4,050 ನಗದು ಮತ್ತು ಎರಡು ಬೈಕ್ ಸೇರಿದಂತೆ ₹ 1.69 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಕೇರಳದಿಂದ ಗಾಂಜಾ ಖರೀದಿಸಿ ತಂದು ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳಲ್ಲಿ ಏಳು ಮಂದಿ ಕೇರಳದವರಾಗಿದ್ದು ನಗರದ ಎರಡು ಎಂಜಿನಿಯರಿಂಗ್ ಕಾಲೇಜು ಮತ್ತು ಒಂದು ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…