Featured

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂಟು ವಿದ್ಯಾರ್ಥಿಗಳ ಬಂಧನ..

ಮಂಗಳೂರು: ನಗರದ ಮೋರ್ಗನ್‌ ಗೇಟ್‌ ಬಳಿಯ ಮೈದಾನದಲ್ಲಿ ಶನಿವಾರ ಗಾಂಜಾ ಸೇವಿಸುತ್ತಲೇ ಸಾರ್ವಜನಿಕರಿಗೆ ಅದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂಟು ವಿದ್ಯಾರ್ಥಿಗಳನ್ನು ನಗರ ಅಪರಾಧ ಘಟಕ (ಸಿಸಿಬಿ) ಹಾಗೂ ಆರ್ಥಿಕ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣ (ಇ ಅಂಡ್‌ ಎನ್‌) ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಏಳು ಮಂದಿ ಕೇರಳದ ವಿದ್ಯಾರ್ಥಿಗಳು.

‘ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕೆರೆ ಕರಿಪ್ರ ನಿವಾಸಿ ಅಕ್ಷಯ್‌ ಕೆ.ಪ್ರಸಾದ್ (22), ಮಂಗಳೂರಿನ ಕಣ್ಣೂರು ಬೋರುಗುಡ್ಡೆ ನಿವಾಸಿ ಜಾಫರ್ (22), ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬ ಸಮೀಪದ ಶ್ರೀಕಂಠಪುರಂ ಗ್ರಾಮದ ಕೋಟ್ಟೂರು ತರಯಿಲ್‌ ನಿವಾಸಿ ನಿಮಿಲ್‌ (21), ಕಣ್ಣೂರು ಜಿಲ್ಲೆಯ ಎಡಕ್ಕಾಡ್ ಗ್ರಾಮದ ಮಾವಿಲಾಯ್‌ ನಿವಾಸಿ ಅಮಿತ್ ಶ್ರೀವತ್ಸನ್‌ (21), ಕಣ್ಣೂರು ಜಿಲ್ಲೆಯ ಕಪ್ಪಾಡ್ ಗ್ರಾಮದ ಚೆಲೂರಾ ನಿವಾಸಿ ಅಶ್ವಿನ್‌ (21), ಕೋಯಿಕ್ಕೋಡ್‌ ಜಿಲ್ಲೆಯ ಪುದಿಯಂಘಾಡಿ ಸಮೀಪದ ಮರಕ್ಕಾರಗಂಪರಂಬ್ ನಿವಾಸಿ ಮೊಹಮ್ಮದ್ ಅಮೀರ್‌, ಪತ್ತನಂತಿಟ್ಟ ಜಿಲ್ಲೆಯ ಅರನ್ಮುಲ ಗ್ರಾಮದ ನಾಲ್ಕಲಿಕ್ಕಲ್‌ ನಿವಾಸಿ ಆಕಾಶ್ ಎಸ್‌.ನಾಯರ್‌ ಮತ್ತು ಕಣ್ಣೂರು ಜಿಲ್ಲೆಯ ಪಯ್ಯಂಬಲ ನಿವಾಸಿ ಅಕ್ಷಯ್‌ ಎಂಬುವವರನ್ನು ಬಂಧಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಟಿ.ಆರ್‌.ಸುರೇಶ್ ತಿಳಿಸಿದ್ದಾರೆ.

ಆರೋಪಿಗಳಿಂದ ₹ 12,000 ಮೌಲ್ಯದ 500 ಗ್ರಾಂ. ಗಾಂಜಾ, 8 ಮೊಬೈಲ್‌ ಫೋನ್‌, ₹ 4,050 ನಗದು ಮತ್ತು ಎರಡು ಬೈಕ್‌ ಸೇರಿದಂತೆ ₹ 1.69 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಕೇರಳದಿಂದ ಗಾಂಜಾ ಖರೀದಿಸಿ ತಂದು ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳಲ್ಲಿ ಏಳು ಮಂದಿ ಕೇರಳದವರಾಗಿದ್ದು ನಗರದ ಎರಡು ಎಂಜಿನಿಯರಿಂಗ್‌ ಕಾಲೇಜು ಮತ್ತು ಒಂದು ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ಕಮಿಷನರ್‌ ಮಾಹಿತಿ ನೀಡಿದ್ದಾರೆ.

 

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

3 hours ago