Featured

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂಟು ವಿದ್ಯಾರ್ಥಿಗಳ ಬಂಧನ..

ಮಂಗಳೂರು: ನಗರದ ಮೋರ್ಗನ್‌ ಗೇಟ್‌ ಬಳಿಯ ಮೈದಾನದಲ್ಲಿ ಶನಿವಾರ ಗಾಂಜಾ ಸೇವಿಸುತ್ತಲೇ ಸಾರ್ವಜನಿಕರಿಗೆ ಅದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂಟು ವಿದ್ಯಾರ್ಥಿಗಳನ್ನು ನಗರ ಅಪರಾಧ ಘಟಕ (ಸಿಸಿಬಿ) ಹಾಗೂ ಆರ್ಥಿಕ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣ (ಇ ಅಂಡ್‌ ಎನ್‌) ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಏಳು ಮಂದಿ ಕೇರಳದ ವಿದ್ಯಾರ್ಥಿಗಳು.

‘ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕೆರೆ ಕರಿಪ್ರ ನಿವಾಸಿ ಅಕ್ಷಯ್‌ ಕೆ.ಪ್ರಸಾದ್ (22), ಮಂಗಳೂರಿನ ಕಣ್ಣೂರು ಬೋರುಗುಡ್ಡೆ ನಿವಾಸಿ ಜಾಫರ್ (22), ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬ ಸಮೀಪದ ಶ್ರೀಕಂಠಪುರಂ ಗ್ರಾಮದ ಕೋಟ್ಟೂರು ತರಯಿಲ್‌ ನಿವಾಸಿ ನಿಮಿಲ್‌ (21), ಕಣ್ಣೂರು ಜಿಲ್ಲೆಯ ಎಡಕ್ಕಾಡ್ ಗ್ರಾಮದ ಮಾವಿಲಾಯ್‌ ನಿವಾಸಿ ಅಮಿತ್ ಶ್ರೀವತ್ಸನ್‌ (21), ಕಣ್ಣೂರು ಜಿಲ್ಲೆಯ ಕಪ್ಪಾಡ್ ಗ್ರಾಮದ ಚೆಲೂರಾ ನಿವಾಸಿ ಅಶ್ವಿನ್‌ (21), ಕೋಯಿಕ್ಕೋಡ್‌ ಜಿಲ್ಲೆಯ ಪುದಿಯಂಘಾಡಿ ಸಮೀಪದ ಮರಕ್ಕಾರಗಂಪರಂಬ್ ನಿವಾಸಿ ಮೊಹಮ್ಮದ್ ಅಮೀರ್‌, ಪತ್ತನಂತಿಟ್ಟ ಜಿಲ್ಲೆಯ ಅರನ್ಮುಲ ಗ್ರಾಮದ ನಾಲ್ಕಲಿಕ್ಕಲ್‌ ನಿವಾಸಿ ಆಕಾಶ್ ಎಸ್‌.ನಾಯರ್‌ ಮತ್ತು ಕಣ್ಣೂರು ಜಿಲ್ಲೆಯ ಪಯ್ಯಂಬಲ ನಿವಾಸಿ ಅಕ್ಷಯ್‌ ಎಂಬುವವರನ್ನು ಬಂಧಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಟಿ.ಆರ್‌.ಸುರೇಶ್ ತಿಳಿಸಿದ್ದಾರೆ.

ಆರೋಪಿಗಳಿಂದ ₹ 12,000 ಮೌಲ್ಯದ 500 ಗ್ರಾಂ. ಗಾಂಜಾ, 8 ಮೊಬೈಲ್‌ ಫೋನ್‌, ₹ 4,050 ನಗದು ಮತ್ತು ಎರಡು ಬೈಕ್‌ ಸೇರಿದಂತೆ ₹ 1.69 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಕೇರಳದಿಂದ ಗಾಂಜಾ ಖರೀದಿಸಿ ತಂದು ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳಲ್ಲಿ ಏಳು ಮಂದಿ ಕೇರಳದವರಾಗಿದ್ದು ನಗರದ ಎರಡು ಎಂಜಿನಿಯರಿಂಗ್‌ ಕಾಲೇಜು ಮತ್ತು ಒಂದು ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ಕಮಿಷನರ್‌ ಮಾಹಿತಿ ನೀಡಿದ್ದಾರೆ.

 

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

20 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

21 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

21 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

22 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

22 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

22 hours ago