Featured

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂಟು ವಿದ್ಯಾರ್ಥಿಗಳ ಬಂಧನ..

ಮಂಗಳೂರು: ನಗರದ ಮೋರ್ಗನ್‌ ಗೇಟ್‌ ಬಳಿಯ ಮೈದಾನದಲ್ಲಿ ಶನಿವಾರ ಗಾಂಜಾ ಸೇವಿಸುತ್ತಲೇ ಸಾರ್ವಜನಿಕರಿಗೆ ಅದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂಟು ವಿದ್ಯಾರ್ಥಿಗಳನ್ನು ನಗರ ಅಪರಾಧ ಘಟಕ (ಸಿಸಿಬಿ) ಹಾಗೂ ಆರ್ಥಿಕ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣ (ಇ ಅಂಡ್‌ ಎನ್‌) ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಏಳು ಮಂದಿ ಕೇರಳದ ವಿದ್ಯಾರ್ಥಿಗಳು.

‘ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕೆರೆ ಕರಿಪ್ರ ನಿವಾಸಿ ಅಕ್ಷಯ್‌ ಕೆ.ಪ್ರಸಾದ್ (22), ಮಂಗಳೂರಿನ ಕಣ್ಣೂರು ಬೋರುಗುಡ್ಡೆ ನಿವಾಸಿ ಜಾಫರ್ (22), ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬ ಸಮೀಪದ ಶ್ರೀಕಂಠಪುರಂ ಗ್ರಾಮದ ಕೋಟ್ಟೂರು ತರಯಿಲ್‌ ನಿವಾಸಿ ನಿಮಿಲ್‌ (21), ಕಣ್ಣೂರು ಜಿಲ್ಲೆಯ ಎಡಕ್ಕಾಡ್ ಗ್ರಾಮದ ಮಾವಿಲಾಯ್‌ ನಿವಾಸಿ ಅಮಿತ್ ಶ್ರೀವತ್ಸನ್‌ (21), ಕಣ್ಣೂರು ಜಿಲ್ಲೆಯ ಕಪ್ಪಾಡ್ ಗ್ರಾಮದ ಚೆಲೂರಾ ನಿವಾಸಿ ಅಶ್ವಿನ್‌ (21), ಕೋಯಿಕ್ಕೋಡ್‌ ಜಿಲ್ಲೆಯ ಪುದಿಯಂಘಾಡಿ ಸಮೀಪದ ಮರಕ್ಕಾರಗಂಪರಂಬ್ ನಿವಾಸಿ ಮೊಹಮ್ಮದ್ ಅಮೀರ್‌, ಪತ್ತನಂತಿಟ್ಟ ಜಿಲ್ಲೆಯ ಅರನ್ಮುಲ ಗ್ರಾಮದ ನಾಲ್ಕಲಿಕ್ಕಲ್‌ ನಿವಾಸಿ ಆಕಾಶ್ ಎಸ್‌.ನಾಯರ್‌ ಮತ್ತು ಕಣ್ಣೂರು ಜಿಲ್ಲೆಯ ಪಯ್ಯಂಬಲ ನಿವಾಸಿ ಅಕ್ಷಯ್‌ ಎಂಬುವವರನ್ನು ಬಂಧಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಟಿ.ಆರ್‌.ಸುರೇಶ್ ತಿಳಿಸಿದ್ದಾರೆ.

ಆರೋಪಿಗಳಿಂದ ₹ 12,000 ಮೌಲ್ಯದ 500 ಗ್ರಾಂ. ಗಾಂಜಾ, 8 ಮೊಬೈಲ್‌ ಫೋನ್‌, ₹ 4,050 ನಗದು ಮತ್ತು ಎರಡು ಬೈಕ್‌ ಸೇರಿದಂತೆ ₹ 1.69 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಕೇರಳದಿಂದ ಗಾಂಜಾ ಖರೀದಿಸಿ ತಂದು ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳಲ್ಲಿ ಏಳು ಮಂದಿ ಕೇರಳದವರಾಗಿದ್ದು ನಗರದ ಎರಡು ಎಂಜಿನಿಯರಿಂಗ್‌ ಕಾಲೇಜು ಮತ್ತು ಒಂದು ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ಕಮಿಷನರ್‌ ಮಾಹಿತಿ ನೀಡಿದ್ದಾರೆ.

 

Vishwa News 24

Recent Posts

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

40 minutes ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

47 minutes ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ – vishwanews24

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್…

59 minutes ago

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ – vishwanews24

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು…

1 hour ago

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ – vishwanews24

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಕೋಲ್ಕತ್ತಾ :ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ…

1 hour ago

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – vishwanews24

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ…

1 hour ago