ಹೊಸದಿಲ್ಲಿ: ಗಾಂಧಿ ಕುಟುಂಬವನ್ನ ಹೊರತುಪಡಿಸಿ ಬೇರೆ ಯಾರಾದರೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲೇ ಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಹೇಳಿದ್ದಾರೆ.
ರಾಹುಲ್ ಗಾಂಧಿ ಎಐಸಿಸಿಗೆ ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎನ್ನುವ ಅಭಿಪ್ರಾಯ ಪಟ್ಟಿದ್ದರು. ಇದಕ್ಕೆ ಪ್ರಿಯಾಂಕಾ ಗಾಂಧಿ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.
ನಮ್ಮ ಕುಟುಂಬ ಯಾರೊಬ್ಬರೂ ಕಾಂಗ್ರೆಸ್ ಪಕ್ಷಕ್ಕೆ ಅಧ್ಯಕ್ಷರಾಗುವುದಿಲ್ಲ ಎಂದು ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಅದಕ್ಕೆ ನನ್ನ ಸಂಪೂರ್ಣ ಸಹಮತವಿದೆ.
ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ನಾವು ನಮ್ಮ ನಾಯಕ ಎಂದು ಒಪ್ಪಿಕೊಳ್ಳಲು ಸಿದ್ಧರಿದ್ದೇವೆ. ಒಂದು ವೇಳೆ ನಮ್ಮ ಪಕ್ಷದ ಅಧ್ಯಕ್ಷರಾಗುವವರು ‘ನೀನು ಉತ್ತರ ಪ್ರದೇಶದ ಜವಾಬ್ದಾರಿ ತೆಗೆದುಕೊಳ್ಳುವುದು ಬೇಡ, ಅಂಡಮಾನ್ ನಿಕೋಬಾರ್ಗೆ ಹೋಗು’ ಎಂದು ಹೇಳಿದರೂ ನಾನು ಅದನ್ನು ಸ್ವೀಕರಿಸಲು ಸಿದ್ಧಳಿದ್ದೇನೆ. ನಮ್ಮ ಪಕ್ಷದ ಅಧ್ಯಕ್ಷರು ಯಾರೇ ಆದರೂ ಅವರ ಆದೇಶವನ್ನು ನಾನು ಖಂಡಿತ ಪಾಲಿಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.
ಸಹೋದರ ರಾಹುಲ್ ಗಾಂಧಿ ಹೇಳುವಂತೆ ಗಾಂಧಿಯೇತರ ವ್ಯಕ್ತಿ ಅಧ್ಯಕ್ಷಗಿರಿಗೆ ಏರಬೇಕು ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ. ನಮ್ಮಲ್ಲಿ ಯಾರು ಕೂಡ ಪಕ್ಷದ ಅಧ್ಯಕ್ಷರಾಗುವುದು ಬೇಡ ಎಂದು ಈ ಹಿಂದೆ ರಾಹುಲ್ ಗಾಂಧಿ ಹೇಳಿದ್ದರು ಎನ್ನುವುದನ್ನ ಸ್ಮರಿಸಿದ ಪ್ರಿಯಾಂಕ, ನಾನು ಅವರ(ರಾಹುಲ್) ಮಾತಿಗೆ ಸಹಮತ ವ್ಯಕ್ತಪಡಿಸುತ್ತೇನೆ. ಯಾಕೆಂದರೆ ಪಕ್ಷವು ತನ್ನದೆ ಹಾದಿಯನ್ನ ಈಗ ಕಂಡುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ನಾನು ಭಾವಿಸುತ್ತಿರುವುದಾಗಿ ಪ್ರಿಯಾಂಕ ಹೇಳಿದ್ದಾರೆ.
ಇನ್ನು ಯಾರೇ ಪಕ್ಷದ ಅಧ್ಯಕ್ಷರಾದರು ನಾನು ಅವರ ಮಾತನ್ನ ಚಾಚು ತಪ್ಪದೆ ಪಾಲಿಸುತ್ತೇನೆ. ಉತ್ತರ ಪ್ರದೇಶವಲ್ಲ, ಅಂಡಮಾನ್ ಮತ್ತು ನಿಕೋಬಾರ್ನಲ್ಲಿ ಕೆಲಸ ಮಾಡಲು ಪಕ್ಷ ಸೂಚಿಸಿದರೆ ಅದನ್ನು ಸರಿಯಾಗಿ ನಿರ್ವಹಿಸುತ್ತೇನೆ ಎಂದು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…