ಹೊಸದಿಲ್ಲಿ: ರಾಷ್ಟ್ರದ ಅಧಿಕಾರದ ಚುಕ್ಕಾಣಿ ಹಾಗೂ ಗಾಂಧಿ ಕುಟುಂಬದ ನಡುವೆ ಅವಿನಾಭಾವ ಸಂಬಂಧವಿದೆ. ಆದರೆ, ಗಾಂಧಿ ಕುಟುಂಬ ಯಾವತ್ತೂ ಅಧಿಕಾರಕ್ಕಾಗಿ ಆಸೆಪಟ್ಟಿಲ್ಲ, ಹಲವು ಬಾರಿ ಪ್ರಧಾನಿ ಹುದ್ದೆ ಗಾಂಧಿ ಮನೆತನದ ಮನೆ ಬಾಗಿಲಿಗೆ ಬಂದರೂ ಬೇಡ ಎಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಬಿಹಾರ್ ಕಾಂಗ್ರೆಸ್ ಉಸ್ತುವಾರಿ ಶಕ್ತಿ ಸಿಂಗ್ ಗೋಹಿಲ್ ಹೇಳಿದ್ದಾರೆ.
ಬುಧವಾರ ಮಾತನಾಡಿರುವ ಗೋಹಿಲ್, 1991ರಲ್ಲಿ ಅಂದಿನ ಪ್ರಧಾನಿ ನರಸಿಂಹ ರಾವ್ ಅವರು ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ಹುದ್ದೆ ವಹಿಸಿಕೊಳ್ಳುವಂತೆ ಕೇಳಿದ್ದರು. ಆದರೆ, ಸೋನಿಯಾಜಿ ಅದನ್ನು ನಿರಾಕರಿಸಿದ್ದರು. 2004 ಯುಪಿಎ ಮೊದಲ ಅವಧಿಯಲ್ಲಿ ಸೋನಿಯಾ ಗಾಂಧಿ ಅವರು ಮನಮೋಹನ್ ಸಿಂಗ್ ಅವರನ್ನು ಪ್ರಧಾನಿಯನ್ನಾಗುವಂತೆ ಕೇಳಿದ್ದರು ಎಂದು ತಿಳಿಸಿದ್ದಾರೆ,
ಇನ್ನು, 2009ರಲ್ಲಿ ಯುಪಿಎ ಎರಡನೇ ಅವಧಿಯಲ್ಲಿ ಮನಮೋಹನ್ ಸಿಂಗ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆಗ ರಾಹುಲ್ ಗಾಂಧಿಗೆ ಪ್ರಧಾನಿಯಾಗಿ ಎಂದು ಹೇಳಿದಾಗಲೂ ರಾಹುಲ್ ಗಾಂಧಿ ಅವಕಾಶವನ್ನು ನಿರಾಕರಿಸಿ ಅವರನ್ನೇ ಪ್ರಧಾನಿಯನ್ನಾಗಿ ಮುಂದುವರೆಸಿದರು ಎಂದು ಶಕ್ತಿ ಸಿಂಗ್ ಗೋಹಿಲ್ ಹೇಳಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ನಂತರ ಗಾಂಧಿ ಕುಟುಂಬದಿಂದ ಯಾರೂ ಪ್ರಧಾನಿಯಾಗಿಲ್ಲ.
ಬುಧವಾರ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ಗೆ ಗಾಂಧಿಯೇತರ ವ್ಯಕ್ತಿ ಅಧ್ಯಕ್ಷರಾಗಬೇಕು ಎಂದು ಹೇಳಿ ಗಾಂಧಿ ಮನೆತನ ಅಧಿಕಾರಕ್ಕಾಗಿ ಇಲ್ಲ ಎಂಬುದನ್ನು ಸೂಚ್ಯವಾಗಿ ಹೇಳುವ ಪ್ರಯತ್ನ ಮಾಡಿದ್ದರು. ಈ ಮೂಲಕ ಕಾಂಗ್ರೆಸ್ನ್ನು ಗಾಂಧಿ ಮನೆತನದ ಪಕ್ಷ ಎಂಬುದನ್ನು ಬದಲಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ್ದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…