ಹೊಸದಿಲ್ಲಿ: ರಾಷ್ಟ್ರದ ಅಧಿಕಾರದ ಚುಕ್ಕಾಣಿ ಹಾಗೂ ಗಾಂಧಿ ಕುಟುಂಬದ ನಡುವೆ ಅವಿನಾಭಾವ ಸಂಬಂಧವಿದೆ. ಆದರೆ, ಗಾಂಧಿ ಕುಟುಂಬ ಯಾವತ್ತೂ ಅಧಿಕಾರಕ್ಕಾಗಿ ಆಸೆಪಟ್ಟಿಲ್ಲ, ಹಲವು ಬಾರಿ ಪ್ರಧಾನಿ ಹುದ್ದೆ ಗಾಂಧಿ ಮನೆತನದ ಮನೆ ಬಾಗಿಲಿಗೆ ಬಂದರೂ ಬೇಡ ಎಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಬಿಹಾರ್ ಕಾಂಗ್ರೆಸ್ ಉಸ್ತುವಾರಿ ಶಕ್ತಿ ಸಿಂಗ್ ಗೋಹಿಲ್ ಹೇಳಿದ್ದಾರೆ.
ಬುಧವಾರ ಮಾತನಾಡಿರುವ ಗೋಹಿಲ್, 1991ರಲ್ಲಿ ಅಂದಿನ ಪ್ರಧಾನಿ ನರಸಿಂಹ ರಾವ್ ಅವರು ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ಹುದ್ದೆ ವಹಿಸಿಕೊಳ್ಳುವಂತೆ ಕೇಳಿದ್ದರು. ಆದರೆ, ಸೋನಿಯಾಜಿ ಅದನ್ನು ನಿರಾಕರಿಸಿದ್ದರು. 2004 ಯುಪಿಎ ಮೊದಲ ಅವಧಿಯಲ್ಲಿ ಸೋನಿಯಾ ಗಾಂಧಿ ಅವರು ಮನಮೋಹನ್ ಸಿಂಗ್ ಅವರನ್ನು ಪ್ರಧಾನಿಯನ್ನಾಗುವಂತೆ ಕೇಳಿದ್ದರು ಎಂದು ತಿಳಿಸಿದ್ದಾರೆ,
ಇನ್ನು, 2009ರಲ್ಲಿ ಯುಪಿಎ ಎರಡನೇ ಅವಧಿಯಲ್ಲಿ ಮನಮೋಹನ್ ಸಿಂಗ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆಗ ರಾಹುಲ್ ಗಾಂಧಿಗೆ ಪ್ರಧಾನಿಯಾಗಿ ಎಂದು ಹೇಳಿದಾಗಲೂ ರಾಹುಲ್ ಗಾಂಧಿ ಅವಕಾಶವನ್ನು ನಿರಾಕರಿಸಿ ಅವರನ್ನೇ ಪ್ರಧಾನಿಯನ್ನಾಗಿ ಮುಂದುವರೆಸಿದರು ಎಂದು ಶಕ್ತಿ ಸಿಂಗ್ ಗೋಹಿಲ್ ಹೇಳಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ನಂತರ ಗಾಂಧಿ ಕುಟುಂಬದಿಂದ ಯಾರೂ ಪ್ರಧಾನಿಯಾಗಿಲ್ಲ.
ಬುಧವಾರ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ಗೆ ಗಾಂಧಿಯೇತರ ವ್ಯಕ್ತಿ ಅಧ್ಯಕ್ಷರಾಗಬೇಕು ಎಂದು ಹೇಳಿ ಗಾಂಧಿ ಮನೆತನ ಅಧಿಕಾರಕ್ಕಾಗಿ ಇಲ್ಲ ಎಂಬುದನ್ನು ಸೂಚ್ಯವಾಗಿ ಹೇಳುವ ಪ್ರಯತ್ನ ಮಾಡಿದ್ದರು. ಈ ಮೂಲಕ ಕಾಂಗ್ರೆಸ್ನ್ನು ಗಾಂಧಿ ಮನೆತನದ ಪಕ್ಷ ಎಂಬುದನ್ನು ಬದಲಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…