ನವದೆಹಲಿ: ದೇಶಾದ್ಯಂತ ಇಂದು ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನವನ್ನು ಶ್ರದ್ಧಾ ಭಕ್ತಿ ಗಳೊಂದಿಗೆ ಆಚರಿಸಲಾಗುತ್ತಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗಾಂಧೀಜಿಯವರನ್ನು ಸ್ಮರಿಸಿ, ಗಾಂಧೀಜಿಯವರ 150ನೇ ಜಯಂತಿಯ ಈ ಸಮಯ ನಮಗೆ ಸತ್ಯ. ಅಹಿಂಸೆ, ಸಹಕಾರ, ನೈತಿಕತೆ ಮತ್ತು ಸರಳತೆಯ ಮೌಲ್ಯಗಳನ್ನು ನೆನಪಿಸಿ ಜೀವನದಲ್ಲಿ ಅಳವಡಿಸಿಕೊಳ್ಳಲು ಸುಸಂದರ್ಭವಾಗಿದೆ. ಅವರ ಸಂದೇಶಗಳು ನಮಗೆ ಪ್ರಸ್ತುತವಾಗಿದ್ದು ಅವರ ಮಾರ್ಗದರ್ಶನಗಳು ಎಂದೆಂದಿಗೂ ದಾರಿದೀಪ ಎಂದಿದ್ದಾರೆ,
ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ. ಪ್ರೀತಿಯ ಬಾಪುಗೆ ನಮನಗಳು. ಮಾನವೀಯತೆಗೆ ಗಾಂಧೀಜಿಯವರು ನೀಡಿದ ಅಮೂಲ್ಯ ಕೊಡುಗೆಗಳಿಗೆ ನಮ್ಮ ಕೃತಜ್ಞತೆಗಳು. ಅವರ ಕನಸನ್ನು ಸಾಕಾರಗೊಳಿಸಲು ಮತ್ತು ಉತ್ತಮ ಸಮಾಜ ನಿರ್ಮಾಣಕ್ಕೆ ನಾವು ಪಣತೊಟ್ಟು ಅದರ ಕಡೆಗೆ ಕೆಲಸ ಮಾಡೋಣ ಎಂದಿದ್ದಾರೆ.
ನಂತರ ಇಂದು ಬೆಳಗ್ಗೆ ದೆಹಲಿಯ ರಾಜಘಾಟ್ ನಲ್ಲಿರುವ ಮಹಾತ್ಮಾ ಗಾಂಧಿ ಸಮಾದಿಗೆ ತೆರಳಿದ ಮೋದಿ ಬಾಪೂಜಿಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಭಾರತೀಯ ಜನತಾ ಪಾರ್ಟಿಯ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಉಪಸ್ಥಿತರಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಸಹ ಗಾಂಧೀಜಿ ಸಮಾಧಿಗೆ ಪುಷ್ಪ ಗೌರವ ಸಲ್ಲಿಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…