ನವದೆಹಲಿ: ದೇಶಾದ್ಯಂತ ಇಂದು ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನವನ್ನು ಶ್ರದ್ಧಾ ಭಕ್ತಿ ಗಳೊಂದಿಗೆ ಆಚರಿಸಲಾಗುತ್ತಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗಾಂಧೀಜಿಯವರನ್ನು ಸ್ಮರಿಸಿ, ಗಾಂಧೀಜಿಯವರ 150ನೇ ಜಯಂತಿಯ ಈ ಸಮಯ ನಮಗೆ ಸತ್ಯ. ಅಹಿಂಸೆ, ಸಹಕಾರ, ನೈತಿಕತೆ ಮತ್ತು ಸರಳತೆಯ ಮೌಲ್ಯಗಳನ್ನು ನೆನಪಿಸಿ ಜೀವನದಲ್ಲಿ ಅಳವಡಿಸಿಕೊಳ್ಳಲು ಸುಸಂದರ್ಭವಾಗಿದೆ. ಅವರ ಸಂದೇಶಗಳು ನಮಗೆ ಪ್ರಸ್ತುತವಾಗಿದ್ದು ಅವರ ಮಾರ್ಗದರ್ಶನಗಳು ಎಂದೆಂದಿಗೂ ದಾರಿದೀಪ ಎಂದಿದ್ದಾರೆ,
ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ. ಪ್ರೀತಿಯ ಬಾಪುಗೆ ನಮನಗಳು. ಮಾನವೀಯತೆಗೆ ಗಾಂಧೀಜಿಯವರು ನೀಡಿದ ಅಮೂಲ್ಯ ಕೊಡುಗೆಗಳಿಗೆ ನಮ್ಮ ಕೃತಜ್ಞತೆಗಳು. ಅವರ ಕನಸನ್ನು ಸಾಕಾರಗೊಳಿಸಲು ಮತ್ತು ಉತ್ತಮ ಸಮಾಜ ನಿರ್ಮಾಣಕ್ಕೆ ನಾವು ಪಣತೊಟ್ಟು ಅದರ ಕಡೆಗೆ ಕೆಲಸ ಮಾಡೋಣ ಎಂದಿದ್ದಾರೆ.
ನಂತರ ಇಂದು ಬೆಳಗ್ಗೆ ದೆಹಲಿಯ ರಾಜಘಾಟ್ ನಲ್ಲಿರುವ ಮಹಾತ್ಮಾ ಗಾಂಧಿ ಸಮಾದಿಗೆ ತೆರಳಿದ ಮೋದಿ ಬಾಪೂಜಿಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಭಾರತೀಯ ಜನತಾ ಪಾರ್ಟಿಯ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಉಪಸ್ಥಿತರಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಸಹ ಗಾಂಧೀಜಿ ಸಮಾಧಿಗೆ ಪುಷ್ಪ ಗೌರವ ಸಲ್ಲಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…