ನವದೆಹಲಿ: ದೇಶಾದ್ಯಂತ ಇಂದು ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನವನ್ನು ಶ್ರದ್ಧಾ ಭಕ್ತಿ ಗಳೊಂದಿಗೆ ಆಚರಿಸಲಾಗುತ್ತಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗಾಂಧೀಜಿಯವರನ್ನು ಸ್ಮರಿಸಿ, ಗಾಂಧೀಜಿಯವರ 150ನೇ ಜಯಂತಿಯ ಈ ಸಮಯ ನಮಗೆ ಸತ್ಯ. ಅಹಿಂಸೆ, ಸಹಕಾರ, ನೈತಿಕತೆ ಮತ್ತು ಸರಳತೆಯ ಮೌಲ್ಯಗಳನ್ನು ನೆನಪಿಸಿ ಜೀವನದಲ್ಲಿ ಅಳವಡಿಸಿಕೊಳ್ಳಲು ಸುಸಂದರ್ಭವಾಗಿದೆ. ಅವರ ಸಂದೇಶಗಳು ನಮಗೆ ಪ್ರಸ್ತುತವಾಗಿದ್ದು ಅವರ ಮಾರ್ಗದರ್ಶನಗಳು ಎಂದೆಂದಿಗೂ ದಾರಿದೀಪ ಎಂದಿದ್ದಾರೆ,
ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ. ಪ್ರೀತಿಯ ಬಾಪುಗೆ ನಮನಗಳು. ಮಾನವೀಯತೆಗೆ ಗಾಂಧೀಜಿಯವರು ನೀಡಿದ ಅಮೂಲ್ಯ ಕೊಡುಗೆಗಳಿಗೆ ನಮ್ಮ ಕೃತಜ್ಞತೆಗಳು. ಅವರ ಕನಸನ್ನು ಸಾಕಾರಗೊಳಿಸಲು ಮತ್ತು ಉತ್ತಮ ಸಮಾಜ ನಿರ್ಮಾಣಕ್ಕೆ ನಾವು ಪಣತೊಟ್ಟು ಅದರ ಕಡೆಗೆ ಕೆಲಸ ಮಾಡೋಣ ಎಂದಿದ್ದಾರೆ.
ನಂತರ ಇಂದು ಬೆಳಗ್ಗೆ ದೆಹಲಿಯ ರಾಜಘಾಟ್ ನಲ್ಲಿರುವ ಮಹಾತ್ಮಾ ಗಾಂಧಿ ಸಮಾದಿಗೆ ತೆರಳಿದ ಮೋದಿ ಬಾಪೂಜಿಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಭಾರತೀಯ ಜನತಾ ಪಾರ್ಟಿಯ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಉಪಸ್ಥಿತರಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಸಹ ಗಾಂಧೀಜಿ ಸಮಾಧಿಗೆ ಪುಷ್ಪ ಗೌರವ ಸಲ್ಲಿಸಿದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…