ಗಾಂಧೀಜಿ ಹಿಂದೂ ವಿರೋಧಿಯಾಗಿರಲಿಲ್ಲ,ಅವರನ್ನು ಕೊಂದಿದ್ದು ಆರ್‌ಎಸ್‌ಎಸ್‌ ಹಾಗೂ ಹಿಂದೂ ಮಹಾಸಭಾದವರು : ಸಿದ್ದರಾಮಯ್ಯ -Vishwanews24

ಚಿಕ್ಕಮಗಳೂರು: “ಸಿ.ಟಿ ರವಿ ಯಾವತ್ತು ಸತ್ಯ ಹೇಳಿ ಗೊತ್ತಿಲ್ಲ. ಸುಳ್ಳು ಮೈಗೂಡಿಸಿಕೊಂಡಿದ್ದಾರೆ. ಸಿ.ಟಿ ರವಿ ಅವರ ಅಭಿವೃದ್ಧಿಯಾಗಿದೆ ಹೊರತು ಜನರ ಅಭಿವೃದ್ಧಿಯಾಗಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಖಾಸಗಿ ಹೋಟೇಲ್‌‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ನಾವು ನಮ್ಮ ಅಭಿಪ್ರಾಯವನ್ನು ರಾಜ್ಯಪಾಲರ ಭಾಷಣದ ಪ್ರತಿ ನೋಡಿದ ಮೇಲೆ ತಿಳಿಸಲೇ ಬೇಕಾಗುತ್ತದೆ. ಶಾಸಕರ ಹಕ್ಕನ್ನು ನಾವು ರಾಜ್ಯದ ಜನತೆಯ ಧ್ವನಿಯಾಗಿ ಕೆಲಸ ಮಾಡಬೇಕಾಗುತ್ತದೆ. ರಾಜ್ಯಪಾಲರ ಭಾಷಣದಲ್ಲಿ ಆಕ್ಷೇಪಾರ್ಹ ವಿಷಯಗಳಿದ್ದರೆ ನಂತರದ ಮಾತು. ಪ್ರತಿಭಟಿಸುವ ಶಾಸಕರನ್ನು ಅಮಾನತಿನಲ್ಲಿ ಇಡುತ್ತೇವೆ ಎನ್ನುವುದು ಅಸಂವಿಧಾನಿಕ. ವಿನಾ ಕಾರಣ ಭಾಷಣಕ್ಕೆ ಅಡ್ಡಿಪಡಿಸುವುದಿಲ್ಲ ಆಕ್ಷೇಪಾರ್ಹವಿದ್ದರೆ ಪ್ರತಿಭಟಿಸಬೇಕಾಗುತ್ತದೆ” ಎಂದರು.

ಅಭಿವೃದ್ದಿ ವಿಚಾರವಾಗಿ ಸಿಟಿ ರವಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, “ಯಾವತ್ತು ಸಿ ಟಿ ರವಿ ಅವರಿಗೆ ಸತ್ಯ ಹೇಳಿ ಗೊತ್ತಿಲ್ಲ. ಸುಳ್ಳನ್ನು ಮೈಗೂಡಿಸಿಕೊಂಡಿದ್ದಾರೆ. ಸಿ.ಟಿ ರವಿ ಅವರ ಅಭಿವೃದ್ಧಿಯಾಗಿದೆ ಹೊರತು ಜನರ ಅಭಿವೃದ್ಧಿಯಾಗಿಲ್ಲ” ಎಂದು ತಿಳಿಸಿದರು.

“ಕಳೆದ ಬಾರಿ ಬಜೆಟ್ ನಲ್ಲಿ 27 ಲಕ್ಷ ಕೋಟಿ ಖರ್ಚು ಮಾಡುತ್ತೇನೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ಏನು ಮಾಡಿದೆ ಎಂದು ತಿಳಿಯುತ್ತದೆ. ಸ್ವರ್ಗ ಸೃಷ್ಟಿ ಮಾಡುತ್ತೇನೆ ಅಂದಿದ್ದರು. ಅದರೆ ಈಗ ನರಕವಾಗಿದೆ. ಅವರ ಪ್ರಕಾರ ಜಿಡಿಪಿ 4.5%, ನನ್ನ ಪ್ರಕಾರ 2.5%. ಜಿಡಿಪಿ ಇಳಿದಿದೆ. 10 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದಿದ್ದರು ಆದರೆ, ಈಗ ಲಕ್ಷಾಂತರ ಉದ್ಯೋಗ ಕಡಿತಗೊಂಡಿದೆ. ದೇಶದ ಅರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಈ ವಿಚಾರವನ್ನು ಮುಚ್ಚಿ ಹಾಕುವ ಸಲುವಾಗಿ ಸಿಎಎ, ಎನ್‌ಆರ್‌ಸಿ ಮೂಲಕ ಬೇರೆಡೆಗೆ ಸೆಳೆಯಲು ನಾಟಕವಾಡುತ್ತಿದ್ದಾರೆ” ಎಂದು ಹೇಳಿದರು.

ದೆಹಲಿಯಲ್ಲಿ ಜ.30 ಗುರುವಾರ ಗುಂಡು ಹಾರಿಸಿದ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು, “ಗಾಂಧೀಜಿ ಹಿಂದೂ ವಿರೋಧಿಯಾಗಿರಲ್ಲ. ಆರ್‌ಎಸ್‌ಎಸ್‌ ಹಾಗೂ ಹಿಂದೂ ಮಹಾಸಭಾದವರು ಮಹಾತ್ಮ ಗಾಂಧಿಯನ್ನು ಕೊಂದಿದ್ದು. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಕುಮ್ಮಕ್ಕಿನಿಂದ ಗುಂಡು ಹಾರಿಸಿರುವುದು . ಪೊಲೀಸರು ಮೂಖಪ್ರೇಕ್ಷಕರಂತಿದ್ದರೂ ಎಂದರೆ ಏನಾಗಿದೆ ದೇಶದ ಪರಿಸ್ಥಿತಿ ಎಂಬುದು ತಿಳಿಯುತ್ತಿದೆ” ಎಂದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

8 minutes ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

21 minutes ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

43 minutes ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

54 minutes ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

1 hour ago

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಸುರತ್ಕಲ್ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು…

1 hour ago