Featured

ಗಾಯಕ ಎಸ್​.ಪಿ ಬಾಲಸುಬ್ರಮಣ್ಯಂ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ -Vishwanews24

ಚೆನ್ನೈ : ಕಳೆದ ವಾರವಷ್ಟೇ ಕರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ (74) ಆರೋಗ್ಯ ಸ್ಥಿತಿ ಗಂಭೀರವಾಗಿದೆಯೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಚೆನ್ನೈನ ಎಂಜಿ ಹೆಲ್ತ್​ಕೇರ್​ನಲ್ಲಿ ಆಗಸ್ಟ್ 5ರಂದು ಕರೊನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಎಸ್​ಪಿಬಿ ಅವರನ್ನು ದಾಖಲಿಸಲಾಗಿತ್ತು. ಅಂದಿನಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆಸ್ಪತ್ರೆ, ಎಸ್​ಪಿಬಿ ಅವರ ಆರೋಗ್ಯದ ಸ್ಥಿತಿ ಬಗ್ಗೆ ತಿಳಿಸಿದೆ.

ಆಗಸ್ಟ್ 13ರಿಂದ ಎಸ್​ಪಿಬಿ ಅವರ ಸ್ಥಿತಿ ತೀರಾ ಹದಗೆಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಈಗಾಗಲೇ ನುರಿತ ವೈದ್ಯರನ್ನೂ ಕರೆಸಲಾಗಿದೆ. ಸದ್ಯ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ವೆಂಟಿಲೇಟರ್​ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ.

ಆಗಸ್ಟ್ 5ರಂದು ಕರೊನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್​ಪಿಬಿ, ಶೀಘ್ರದಲ್ಲಿ ಗುಣಮುಖನಾಗಿ ಆಚೆ ಬರುವೆ ಎಂದು ಹೇಳಿಕೊಂಡಿದ್ದರು. (ಏಜೆನ್ಸೀಸ್​)

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

11 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

21 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

39 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

43 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

51 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago