ಗೀತಾಂಜಲಿ ಸುವರ್ಣ ವತಿಯಿಂದ ಕಟಪಾಡಿ ಜೆ.ಎನ್ ನಗರಕ್ಕೆ ಟ್ಯಾಂಕರ್ ನೀರು ಸರಬರಾಜಿಗೆ ಸಂಸದೆ ಶೋಭಾ ಚಾಲನೆ.
ಕಟಪಾಡಿ: ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ ವತಿಯಿಂದ ಕಟಪಾಡಿ ಜೆ.ಎನ್ ನಗರ ಕಾಲೋನಿಯ ಜನತೆಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜಿಗೆ ಸಂಸದೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು ಮತ್ತು ಬಡ ಕುಟುಂಬಗಳಿಗೆ ಪಡಿತರ ಕಿಟ್ ವಿತರಿಸಿದರು.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಂಸದೆ” ಬೇಸಿಗೆ ಕಾಲದಲ್ಲಿ ನೀರಿನ ಬರ ನೀಗಿಸಲು ಗೀತಾಂಜಲಿ ಸುವರ್ಣ ವೈಯಕ್ತಿಕ ವತಿಯಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ ಇದನ್ನ ಜನತೆ ಸದುಪಯೋಗ ಪಡಿಸಿಕೊಳ್ಳಬೇಕೆಂದರು”
ಗೀತಾಂಜಲಿ ಸುವರ್ಣ ಮಾತಾಡಿ ” ನನ್ನ ಕ್ಷೇತ್ರದ ಜನತೆಯ ಕಷ್ಟದಲ್ಲಿ ಭಾಗಿಯಾಗುವುದು ಧರ್ಮ ಮತ್ತು ಕರ್ತವ್ಯ ಈ ಹಿಂದಿನ ದಿನಗಳಲ್ಲಿ ಒಂದು ಸುತ್ತಿನ ಕಿಟ್ ವಿತರಣೆ ಮಾಡಿದ್ದು ಪ್ರಸ್ತುತ ನೀರಿನ ಸಮಸ್ಯೆ ಎಂದಾಗ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.
ಈ ಸಂಧರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್,ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗುರ್ಮೆ ಸುರೇಶ್ ಶೆಟ್ಟಿ,ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್,ವೀಣಾ ಶೆಟ್ಟಿ, ಪವಿತ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್
ವಿಶ್ವನ್ಯೂಸ್24: 9343846360
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…