ಜೈಪುರ: ಬಾತ್ ರೂಮ್ ನಲ್ಲಿ ಸ್ನಾನ ಮಾಡುವಾಗ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ.
ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿಗಳು.
ಮಗ ವಿಹಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಂಪತಿಗಳು ಹಾಗೂ ಕುಟುಂಬ ಸದಸ್ಯರು ಶೀತಲ ಅಷ್ಟಮಿ ಹಬ್ಬದ ಪ್ರಯುಕ್ತ ಬಣ್ಣದಲ್ಲಿ ಆಡಿದ್ದರು. ಆದಾದ ಬಳಿಕ ಬಣ್ಣವನ್ನು ತೊಳೆಯಲು ತಮ್ಮ 5 ವರ್ಷದ ಮಗನನ್ನು ಕರೆದುಕೊಂಡು ದಂಪತಿಗಳು ಬಾತ್ ರೂಮ್ ಗೆ ತೆರಳಿದ್ದಾರೆ. ಈ ವೇಳೆ ಗೀಸರ್ ಆನ್ ಮಾಡಿದ್ದಾರೆ. ಕೆಲವೇ ಕ್ಷಣದಲ್ಲಿ ಗೀಸರ್ ಅನಿಲ ಸೋರಿಕೆಯಾಗಿದೆ. ಏಕಾಏಕಿ ಗೀಸರ್ ಗ್ಯಾಸ್ ಲೀಕ್ ಆದ ಪರಿಣಾಮ ದಂಪತಿಗಳಿಗೆ ಉಸಿರುಗಟ್ಟಿ ಏನು ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಇದಾದ ಕೆಲ ಸಮಯದ ಬಳಿಕ ಕುಟುಂಬದ ಇತರ ಸದಸ್ಯರು ಬಾಗಿಲು ಬಡಿದು ಕರೆಯಲು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಬಾಗಿಲು ಒಡೆದು ನೋಡಿದ್ದಾರೆ. ನೋಡುವಾಗ ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇದರಲ್ಲಿ ದಂಪತಿಗಳು ಮೃತಪಟ್ಟಿದ್ದು,ಮಗ ವಿಹಾನ್ ಬದುಕುಳಿದಿದ್ದಾರೆ ಎಂದು ಘಟನೆ ಬಗ್ಗೆ ಪೊಲೀಸರು ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…