ಜೈಪುರ: ಬಾತ್ ರೂಮ್ ನಲ್ಲಿ ಸ್ನಾನ ಮಾಡುವಾಗ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ.
ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿಗಳು.
ಮಗ ವಿಹಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಂಪತಿಗಳು ಹಾಗೂ ಕುಟುಂಬ ಸದಸ್ಯರು ಶೀತಲ ಅಷ್ಟಮಿ ಹಬ್ಬದ ಪ್ರಯುಕ್ತ ಬಣ್ಣದಲ್ಲಿ ಆಡಿದ್ದರು. ಆದಾದ ಬಳಿಕ ಬಣ್ಣವನ್ನು ತೊಳೆಯಲು ತಮ್ಮ 5 ವರ್ಷದ ಮಗನನ್ನು ಕರೆದುಕೊಂಡು ದಂಪತಿಗಳು ಬಾತ್ ರೂಮ್ ಗೆ ತೆರಳಿದ್ದಾರೆ. ಈ ವೇಳೆ ಗೀಸರ್ ಆನ್ ಮಾಡಿದ್ದಾರೆ. ಕೆಲವೇ ಕ್ಷಣದಲ್ಲಿ ಗೀಸರ್ ಅನಿಲ ಸೋರಿಕೆಯಾಗಿದೆ. ಏಕಾಏಕಿ ಗೀಸರ್ ಗ್ಯಾಸ್ ಲೀಕ್ ಆದ ಪರಿಣಾಮ ದಂಪತಿಗಳಿಗೆ ಉಸಿರುಗಟ್ಟಿ ಏನು ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಇದಾದ ಕೆಲ ಸಮಯದ ಬಳಿಕ ಕುಟುಂಬದ ಇತರ ಸದಸ್ಯರು ಬಾಗಿಲು ಬಡಿದು ಕರೆಯಲು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಬಾಗಿಲು ಒಡೆದು ನೋಡಿದ್ದಾರೆ. ನೋಡುವಾಗ ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇದರಲ್ಲಿ ದಂಪತಿಗಳು ಮೃತಪಟ್ಟಿದ್ದು,ಮಗ ವಿಹಾನ್ ಬದುಕುಳಿದಿದ್ದಾರೆ ಎಂದು ಘಟನೆ ಬಗ್ಗೆ ಪೊಲೀಸರು ಹೇಳಿದ್ದಾರೆ.
ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರವಿಂಗಡನೆ ಮಸೂದೆ…
ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಪರವಾನಿಗೆ ಭೂಮಾಪಕರ ಮುಷ್ಕರದಿಂದ…
ಕಾಂಗ್ರೆಸ್ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು…
ವಾಯುಪಡೆ ವಿಮಾನ ಹಾರ್ಡ್ ಲ್ಯಾಂಡಿಂಗ್; ಸ್ಥಗಿತಗೊಂಡಿದ್ದ ಪುಣೆ ಏರ್ಪೋರ್ಟ್ ಪುನಾರಂಭ ಪುಣೆ: ಭಾರತೀಯ ವಾಯುಪಡೆಯ ವಿಮಾನ ಹಾರ್ಡ್ ಲ್ಯಾಂಡಿಂಗ್ನಿಂದ ರಾತ್ರಿಯಿಡೀ…
ಯುಪಿಐ ಹೊಸ ರೂಲ್ಸ್ : 10000 ಹಣ ವರ್ಗಾವಣೆಗೆ 1 ಗಂಟೆ ಕಾಯಬೇಕು ನವದೆಹಲಿ: ಇನ್ಮುಂದೆ ಯುಪಿಐ ಮೂಲಕ 10,000…
ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ…