Featured

ಗುಂಬಜ್ ಮಾದರಿಯಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡುವಂತಿಲ್ಲ , ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ..Vishwanews24

ಗುಂಬಜ್ ಮಾದರಿಯಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡುವಂತಿಲ್ಲ , ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ..

ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೆ ಬದಲಾಯ್ತು ಬಸ್ ನಿಲ್ದಾಣದ ಶೆಲ್ಟರ್..

ಮೈಸೂರು: ಗುಂಬಜ್ ಮಾದರಿಯಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಬಿಜೆಪಿ ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.

ನ. ೧೩ ಟಿಪ್ಪು ನಿಜ ಕನಸುಗಳು ನಾಟಕದ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದ್ದು,ಭಾಷಣದಲ್ಲಿ ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ನಿರ್ಮಿಸುವಂತಿಲ್ಲ ಎಂದು ಹೇಳಿದ್ದಾರೆ.

ಮೈಸೂರಿನ ಊಟಿ ರಸ್ತೆಯ ಬಸ್ ನಿಲ್ದಾಣದ ಮೇಲೆ ಗುಂಬಜ್‍ಗಳು ಇರುವುದನ್ನು ಗಮನಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಅಕ್ಕ ಪಕ್ಕ ಚಿಕ್ಕ ಗುಂಬಜ್‍ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್‌ಗಳಿಗೆ ಹೇಳಿದ್ದೇನೆ. ಮೂರು, ನಾಲ್ಕು ದಿನ ಟೈಮ್ ಕೊಟ್ಟಿದ್ದೇನೆ. ಇಲ್ಲವಾದ್ರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ತಿಳಿಸಿದರು.

 

ಬಸ್​ ತಂಗುದಾಣದ ಮೇಲೆ ಗುಂಬಜ್​​ ಇರುವುದು ಗಮನಿಸಿದ್ದು. ಅಂತಹ ಬಸ್​ ನಿಲ್ದಾಣದ ಗುಂಬಜ್ ತೆರವಿಗೆ ಹೇಳಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್​ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೆ ಬದಲಾಯ್ತು ಬಸ್ ನಿಲ್ದಾಣದ ಶೆಲ್ಟರ್

ಗುಂಬಜ್ ಮಾದರಿ ಬಸ್ ಶೆಲ್ಟರ್ ಒಡೆದು ಹಾಕುವ ಎಚ್ಚರಿಕೆ ನೀಡಿದ್ದ ಸಂಸದ ಪ್ರತಾಪಸಿಂಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಬಸ್ ಶೆಲ್ಟರ್ ಬದಲಾಗಿದೆ. ಇದೀಗ ಬಸ್ ಶೆಲ್ಟರ್ ಗುಂಬಜ್ ಮೇಲೆ ಕಳಶ ಪ್ರತಿಷ್ಠಾಪನೆ ಮಾಡಲಾಗಿದೆ. ಶಾಸಕ ಎಸ್​ಎ ರಾಮದಾಸ್ ಕ್ಷೇತ್ರ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಬಸ್​ ನಿಲ್ದಾಣದ ಶೆಲ್ಟರ್​ನಲ್ಲಿ ಮೂರು ಗುಂಬಜ್‌ಗಳ ಮೇಲೆ ಕಳಸ ಮಾದರಿಯ ಆಕೃತಿ ನಿರ್ಮಾಣ ಮಾಡಲಾಗಿದೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago