ಬಾಲ್ಯದಿಂದಲೇ ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ಗುಜರಾತ್ ಶಾಲೆಯಲ್ಲಿ ಹಾಜರಾತಿ ವೇಳೆ ಮಕ್ಕಳು ಜೈಹಿಂದ್, ಜೈಭಾರತ್ ಹೇಳುತ್ತಾರೆ
ಅಹ್ಮದಾಬಾದ್ : ಗುಜರಾತ್ ಶಾಲಾ ಮಕ್ಕಳು ಇಂದು ಜನವರಿ 1 ರಿಂದ ತರಗತಿ ಶಿಕ್ಷಕರು ಹಾಜರಿ ಕರೆಯುವಾಗ ‘ಪ್ರಸೆಂಟ್ ‘ ಎನ್ನುವಂತಿಲ್ಲ. ಅವರು ‘ಜೈಹಿಂದ್’ ಅಥವಾ ‘ಜೈ ಭಾರತ್’ ಎನ್ನಬೇಕಾಗುತ್ತದೆ.
ಗುಜರಾತಿನ ಪ್ರಾಥಮಿಕ ಮತ್ತು ಹೈಸ್ಕೂಲ್ ಶಿಕ್ಷಣದ ನಿರ್ದೇಶನಾಲಯ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಆ ಪ್ರಕಾರ 1ರಿಂದ 12ನೇ ತರಗತಿಯ ವರೆಗಿನ ವಿದ್ಯಾರ್ಥಿಗಳು ಇಂದಿನಿಂದ ತರಗತಿಯಲ್ಲಿ ಹಾಜರಿ ಕರೆಯುವಾಗ ಜೈಹಿಂದ್ ಅಥವಾ ಜೈ ಭಾರತ್ ಎಂದು ಹೇಳುತ್ತಾರೆ.
ಗುಜರಾತಿನ ಅನುದಾನಿತ ಶಾಲೆಗಳು, ಸ್ವಂತ ಹಣಕಾಸಿನ ಶಾಲೆಗಳು ಕೂಡ ಸರಕಾರದ ಈ ಅಧಿಸೂಚನೆಯಂತೆ ನಡೆದುಕೊಳ್ಳಬೇಕಾಗಿದೆ.
ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಹೈಸ್ಕೂಲ್ ಗಳಲ್ಲಿ ಈ ಹೊಸ ಪದ್ಧತಿಯನ್ನು ಕಟ್ಟುನಿಟ್ಟಿನಿಂದ ಜಾರಿಗೆ ತರುವಂತೆ ಶಿಕ್ಷಕರಿಗೆ, ಶಿಕ್ಷಣಾಧಿಕಾರಿಗಳು ಆದೇಶಿಸಲಾಗಿದೆ.
ಸೋಮವಾರ ನಡೆದ ಸಭೆಯಲ್ಲಿ ಗುಜರಾತ್ ಶಿಕ್ಷಣ ಸಚಿವ ಭೂಪೇಂದ್ರಸಿನ್ ಚುದಾಸಮ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ಬಾಲ್ಯದಿಂದಲೇ ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸಲೆಂದು ಈ ಕ್ರಮವನ್ನು ಪರಿಚಯಿಸಲಾಗಿದೆ.
ನೂತನ ಅಧಿಸೂಚನೆಯನ್ನು ಜಿಲ್ಲಾ ಶಿಕ್ಷಣ ಅಧಿಕಾರಿಗಳಿಗೆ ಕಳುಹಿಸಲಾಗಿದ್ದು, ಜ. 1ರಿಂದಲೇ ಜಾರಿಗೆ ಬರುವಂತೆ ನೋಡಿಕೊಳ್ಳಲು ತಿಳಿಸಲಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…